ಎಲ್ಲ ಪಕ್ಷಗಳೂ ಪ್ರಣಾಳಿಕೆಗಳ ಮೂಲಕ ಜನರನ್ನು ತಕ್ಷಣಕ್ಕೆ ಖುಷಿ ಪಡಿಸಲು ಮುಂದಾಗಿದ್ದುದು ಹಿಂದಿನ ಚುನಾವಣೆಗಳ ಸಂದರ್ಭದ ಪ್ರಣಾಳಿಕೆ ನೋಡಿದರೆ ಸ್ಪಷ್ಟವಾಗುತ್ತದೆ. ನಮ್ಮೆಲ್ಲರ ಇರುವಿಕೆಗೆ, ನೆಮ್ಮದಿಗೆ ಕಾರಣವಾಗುವ ನೆಲ-ಜಲ, ಕಾಡು, ಪ್ರಾಣಿ-ಪಕ್ಷಿ ಇವೇ ಮೊದಲಾದವುಗಳ ಬಗ್ಗೆ ಯಾರೂ ಪ್ರಮುಖವಾಗಿ ಪ್ರಸ್ತಾಪಿಸಿಲ್ಲ.