ಸೋಮವಾರ ಬೆಳಿಗ್ಗೆಯೇ ಮಳೆ ಬಂದ ಕಾರಣ ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರು ಕಷ್ಟ ಪಡಬೇಕಾಯಿತು. ಮುಂಬೈ ಮತ್ತು ಸಮೀಪದ ಪಾಲ್ಘಾರ್, ಠಾಣೆ ಮತ್ತು ರಾಯಗಡ ಜಿಲ್ಲೆಗಳಲ್ಲಿ ಮಂಗಳವಾರವೂ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.