<p><strong>ಪುಣೆ:</strong> ಬುಧವಾರ ರಾತ್ರಿಯಿಂದ ಪುಣೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಗುರುವಾರ ಬೆಳಗ್ಗೆ ಮಳೆ ಕಡಿಮೆಯಾಗಿದೆ. ಮಳೆಯ ಕಾರಣ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.</p>.<p>ಪುಣೆ ಮತ್ತು ಹತ್ತಿರದ ತಾಲ್ಲೂಕುಗಳಾದಪುರಂದರ್, ಭೋರ್, ಬಾರಾಮತಿ ಮತ್ತು ಹವೇಲಿಯಲ್ಲಿರುವ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಪುಣೆ ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p>ಪುಣೆಯ ಪರ್ವತಿ- ಅರಣ್ಯೇಶ್ವರ ಪ್ರದೇಶದಲ್ಲಿ ಐದು ಮೃತದೇಹಗಳನ್ನು ರಕ್ಷಣಾ ತಂಡ ಪತ್ತೆ ಹಚ್ಚಿದ್ದು, ಸಿಂಗ್ನಾಬಾದ್ ರಸ್ತೆಯಲ್ಲಿ ಮಳೆ ನೀರಲ್ಲಿ ಕೊಚ್ಚಿ ಹೋದ ಕಾರಿನೊಳಗೊಂದು ಮತ್ತು ಶಂಕರ್ನಗರ್ ಕಾಲುವೆಯಲ್ಲಿ ಮತ್ತೊಂದು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.</p>.<p>ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ತಂಗೆವಲಿ ಕಾಲೊನಿಯಲ್ಲಿ ಆವರಣ ಗೋಡೆಯೊಂದು ಕುಸಿದು 5 ಮಂದಿ ಸಾವಿಗೀಡಾಗಿದ್ದಾರೆ. ಹತ್ತಿರದ ಕಾಲುವೆಯಲ್ಲಿ ಅಧಿಕ ಮಟ್ಟದಲ್ಲಿ ನೀರು ಹರಿಯುತ್ತಿದ್ದುದರಿಂದ ಆವರಣ ಗೋಡೆ ಕುಸಿದಿದೆ. ಈ ಪ್ರಕರಣದಲ್ಲಿ 3-4 ಮಂದಿ ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಬುಧವಾರ ರಾತ್ರಿಯಿಂದ ಪುಣೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಗುರುವಾರ ಬೆಳಗ್ಗೆ ಮಳೆ ಕಡಿಮೆಯಾಗಿದೆ. ಮಳೆಯ ಕಾರಣ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.</p>.<p>ಪುಣೆ ಮತ್ತು ಹತ್ತಿರದ ತಾಲ್ಲೂಕುಗಳಾದಪುರಂದರ್, ಭೋರ್, ಬಾರಾಮತಿ ಮತ್ತು ಹವೇಲಿಯಲ್ಲಿರುವ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಪುಣೆ ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p>ಪುಣೆಯ ಪರ್ವತಿ- ಅರಣ್ಯೇಶ್ವರ ಪ್ರದೇಶದಲ್ಲಿ ಐದು ಮೃತದೇಹಗಳನ್ನು ರಕ್ಷಣಾ ತಂಡ ಪತ್ತೆ ಹಚ್ಚಿದ್ದು, ಸಿಂಗ್ನಾಬಾದ್ ರಸ್ತೆಯಲ್ಲಿ ಮಳೆ ನೀರಲ್ಲಿ ಕೊಚ್ಚಿ ಹೋದ ಕಾರಿನೊಳಗೊಂದು ಮತ್ತು ಶಂಕರ್ನಗರ್ ಕಾಲುವೆಯಲ್ಲಿ ಮತ್ತೊಂದು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.</p>.<p>ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ತಂಗೆವಲಿ ಕಾಲೊನಿಯಲ್ಲಿ ಆವರಣ ಗೋಡೆಯೊಂದು ಕುಸಿದು 5 ಮಂದಿ ಸಾವಿಗೀಡಾಗಿದ್ದಾರೆ. ಹತ್ತಿರದ ಕಾಲುವೆಯಲ್ಲಿ ಅಧಿಕ ಮಟ್ಟದಲ್ಲಿ ನೀರು ಹರಿಯುತ್ತಿದ್ದುದರಿಂದ ಆವರಣ ಗೋಡೆ ಕುಸಿದಿದೆ. ಈ ಪ್ರಕರಣದಲ್ಲಿ 3-4 ಮಂದಿ ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>