ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಮುಳುಗಡೆ ಪ್ರದೇಶಗಳಲ್ಲಿರುವ ಜನರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೋಡಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಿದ್ದಾರೆ. 500ಕ್ಕೂ ಹೆಚ್ಚು ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದ್ದು ಆಹಾರ, ಬಟ್ಟೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.