<p><strong>ನವದೆಹಲಿ:</strong> ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸಾವಿಗೀಡಾಗಿದ್ದು ತನ್ನ ಶಾಪದಿಂದ ಎಂದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ಹೇಳಿಕೆ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸಿದೆ.</p>.<p>ಸಾಧ್ವಿ ಪ್ರಗ್ಯಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಮೌನ ಮುರಿದ ಬಿಜೆಪಿ, ಇದು ಸಾಧ್ವಿ ಪ್ರಗ್ಯಾ ಅವರ ವೈಯಕ್ತಿಕ ಹೇಳಿಕೆ.ಆಕೆ ಅನುಭವಿಸಿದ ಮಾನಸಿಕ ಮತ್ತು ದೈಹಿಕ ಹಿಂಸೆಯಿಂದಾಗಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆಎಂದಿದೆ.</p>.<p><strong><span style="color:#800000;">ಇದನ್ನೂ ಓದಿ</span>:</strong><a href="https://www.prajavani.net/stories/national/hemant-karkare-died-because-630164.html" target="_blank">ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ</a></p>.<p>ಈ ಹಿಂದೆ ಸಾಧ್ವಿ ಪ್ರಗ್ಯಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಬಿಜೆಪಿ ಪಕ್ಷದ ವಕ್ತಾರ ರಜನೀಶ್ ಅಗರವಾಲ್, ಆಕೆ (ಸಾಧ್ವಿ) ತಮ್ಮ ವೈಯಕ್ತಿಕ ಅನುಭವಗಳಿಂದ ಈ ರೀತಿ ಹೇಳಿದ್ದಾರೆ. ಸೇನಾಪಡೆ ಮತ್ತು ಹುತಾತ್ಮರ ಬಗ್ಗೆ ರಾಜಕೀಯ ಹೇಳಿಕೆ ನೀಡುವ ಮೂಲಕ ಆಕೆ ಚುನಾವಣಾ ಆಯೋಗದ ಆದೇಶವನ್ನುಉಲ್ಲಂಘಿಸಿದ್ದಾರೆ. ಹೇಮಂತ್ ಕರ್ಕರೆ ಅವರು ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದು, 26/11 ಮುಂಬೈ ಭಯೋತ್ಪಾದನಾ ದಾಳಿ ವೇಳೆ ಜನರನ್ನು ರಕ್ಷಿಸಲು ಉಗ್ರರ ವಿರುದ್ಧ ಹೋರಾಡಿ ಹುತಾತ್ಮಾರಾಗಿದ್ದರು ಎಂದಿದ್ದಾರೆ.</p>.<p><span style="color:#800000;"><strong>ಇದನ್ನೂ ಓದಿ:</strong></span><a href="https://www.prajavani.net/stories/national/respect-sacrifice-ips-body-630274.html" target="_blank">ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ</a></p>.<p>2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ಭಯೋತ್ಪಾದನಾ ದಾಳಿ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಹುತಾತ್ಮರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸಾವಿಗೀಡಾಗಿದ್ದು ತನ್ನ ಶಾಪದಿಂದ ಎಂದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ಹೇಳಿಕೆ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸಿದೆ.</p>.<p>ಸಾಧ್ವಿ ಪ್ರಗ್ಯಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಮೌನ ಮುರಿದ ಬಿಜೆಪಿ, ಇದು ಸಾಧ್ವಿ ಪ್ರಗ್ಯಾ ಅವರ ವೈಯಕ್ತಿಕ ಹೇಳಿಕೆ.ಆಕೆ ಅನುಭವಿಸಿದ ಮಾನಸಿಕ ಮತ್ತು ದೈಹಿಕ ಹಿಂಸೆಯಿಂದಾಗಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆಎಂದಿದೆ.</p>.<p><strong><span style="color:#800000;">ಇದನ್ನೂ ಓದಿ</span>:</strong><a href="https://www.prajavani.net/stories/national/hemant-karkare-died-because-630164.html" target="_blank">ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ</a></p>.<p>ಈ ಹಿಂದೆ ಸಾಧ್ವಿ ಪ್ರಗ್ಯಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಬಿಜೆಪಿ ಪಕ್ಷದ ವಕ್ತಾರ ರಜನೀಶ್ ಅಗರವಾಲ್, ಆಕೆ (ಸಾಧ್ವಿ) ತಮ್ಮ ವೈಯಕ್ತಿಕ ಅನುಭವಗಳಿಂದ ಈ ರೀತಿ ಹೇಳಿದ್ದಾರೆ. ಸೇನಾಪಡೆ ಮತ್ತು ಹುತಾತ್ಮರ ಬಗ್ಗೆ ರಾಜಕೀಯ ಹೇಳಿಕೆ ನೀಡುವ ಮೂಲಕ ಆಕೆ ಚುನಾವಣಾ ಆಯೋಗದ ಆದೇಶವನ್ನುಉಲ್ಲಂಘಿಸಿದ್ದಾರೆ. ಹೇಮಂತ್ ಕರ್ಕರೆ ಅವರು ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದು, 26/11 ಮುಂಬೈ ಭಯೋತ್ಪಾದನಾ ದಾಳಿ ವೇಳೆ ಜನರನ್ನು ರಕ್ಷಿಸಲು ಉಗ್ರರ ವಿರುದ್ಧ ಹೋರಾಡಿ ಹುತಾತ್ಮಾರಾಗಿದ್ದರು ಎಂದಿದ್ದಾರೆ.</p>.<p><span style="color:#800000;"><strong>ಇದನ್ನೂ ಓದಿ:</strong></span><a href="https://www.prajavani.net/stories/national/respect-sacrifice-ips-body-630274.html" target="_blank">ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ</a></p>.<p>2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ಭಯೋತ್ಪಾದನಾ ದಾಳಿ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಹುತಾತ್ಮರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>