ಬೆಳಿಗ್ಗೆ ಸುಮಾರು 9 ಗಂಟೆಗೆ ರಾಜ್ಯಪಾಲರು ವಿಧಾನಸಭೆಗೆ ಬಂದಾಗ ಯುಡಿಎಫ್ ಶಾಸಕರು ‘ಗೋ ಬ್ಯಾಕ್’, ‘ನೊ ಟು ಸಿಎಎ’, ಹಾಗೂ ‘ಆರ್ಎಸ್ಎಸ್ ಏಜೆಂಟ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ರಾಜ್ಯಪಾಲರು ಭಾಷಣ ಮಾಡಲು ತೆರಳದಂತೆ ತಡೆದಿದ್ದಾರೆ. ಸ್ಪೀಕರ್ ಪೀಠದ ಎದುರಿಗೆ ಬಂದ ಶಾಸಕರು ಸಿಎಎ ವಿರುದ್ಧ ಫಲಕಗಳನ್ನೂ ಪ್ರದರ್ಶಿಸಿದ್ದಾರೆ. ಈ ವೇಳೆ, ರಾಜ್ಯಪಾಲರಿಗೆ ಅಡ್ಡಿಪಡಿಸದಂತೆ ಶಾಸಕರಲ್ಲಿ ಸ್ಪೀಕರ್ ಶ್ರೀರಾಮಕೃಷ್ಣನ್ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಬಳಿಕ ಮಾರ್ಷಲ್ಗಳು ಬಂದು ರಾಜ್ಯಪಾಲರಿಗೆ ದಾರಿ ಮಾಡಿಕೊಟ್ಟಿದ್ದಾರೆ.