ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಹೈಡ್ರಾಮಾ: ಸಂವಿಧಾನದ ಪ್ರತಿ ಹರಿದುಹಾಕಿದ ಪಿಡಿಪಿ ಸದಸ್ಯರು

ಶಾ ಪ್ರಸ್ತಾವಕ್ಕೆ ಬಿಎಸ್‌ಪಿ, ಎಐಎಡಿಎಂಕೆ, ಬಿಜೆಡಿ ಬೆಂಬಲ
Last Updated 5 ಆಗಸ್ಟ್ 2019, 7:30 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ನಿಲುವಳಿಯನ್ನು ಗೃಹ ಸಚಿವ ಅಮಿತ್ ಶಾ ಮಂಡಿಸಿದ ಬಳಿಕರಾಜ್ಯಸಭೆಯಲ್ಲಿ ಕೋಲಾಹಲದ ವಾತಾವರಣ ಸೃಷ್ಟಿಯಾಯಿತು.

ನಿಲುವಳಿ ವಿರೋಧಿಸಿದಪಿಡಿಪಿ ಸದಸ್ಯ ಮೀರ್ ಮೊಹಮದ್ ಫಯಾಜ್ ಸಂವಿಧಾನದ ಪ್ರತಿಯನ್ನು ರಾಜ್ಯಸಭೆಯಲ್ಲಿ ಹರಿದು ಹಾಕಿದರು. ಕೂಡಲೇ ಕ್ರಮ ಕೈಗೊಂಡಸಭಾಧ್ಯಕ್ಷ ವೆಂಕಯ್ಯ ನಾಯ್ಡು,‘ನೀವು ಸದನದಿಂದ ಹೊರಗೆ ಹೋಗಿ’ ಎಂದುಫಯಾಜ್ ಅವರನ್ನು ಹೊರ ಕಳುಹಿಸಿದರು.

ಸಂವಿಧಾನದ ಪ್ರತಿಯನ್ನು ಹರಿದುಹಾಕಿದ ಪಿಡಿಪಿ ಸದಸ್ಯರ ಕ್ರಮವನ್ನು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಖಂಡಿಸಿದ್ದಾರೆ. ಜತೆಗೆ,ಬಿಜೆಪಿ ಸಂವಿಧಾನದ ಕೊಲೆ ಮಾಡಿದೆ ಎಂದೂ ಆರೋಪಿಸಿದ್ದಾರೆ.

ಬಿಎಸ್‌ಪಿ, ಎಐಎಡಿಎಂಕೆ, ಬಿಜೆಡಿ ಬೆಂಬಲ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಪ್ರಸ್ತಾವಕ್ಕೆ ನಮ್ಮ ಬೆಂಬಲವಿದೆ. ಈ ಮಸೂದೆಗೆ ಸದನದ ಅಂಗೀಕಾರ ಸಿಗಬೇಕು ಎಂದು ರಾಜ್ಯಸಭೆಯಲ್ಲಿ ಬಿಎಸ್‌ಪಿ ನಾಯಕ ಸತೀಶ್‌ ಚಂದ್ರ ಮಿಶ್ರಾ ಹೇಳಿದರು.ಪ್ರಾದೇಶಿಕ ಪಕ್ಷಗಳಾದ ತಮಿಳುನಾಡಿನ ಎಐಎಡಿಎಂಕೆ ಮತ್ತು ಒಡಿಶಾದ ಬಿಜೆಡಿ ಸಹ ಬೆಂಬಲ ಸೂಚಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT