ರಾಜ್ಯಸಭೆಯಲ್ಲಿ ಹೈಡ್ರಾಮಾ: ಸಂವಿಧಾನದ ಪ್ರತಿ ಹರಿದುಹಾಕಿದ ಪಿಡಿಪಿ ಸದಸ್ಯರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ನಿಲುವಳಿಯನ್ನು ಗೃಹ ಸಚಿವ ಅಮಿತ್ ಶಾ ಮಂಡಿಸಿದ ಬಳಿಕ ರಾಜ್ಯಸಭೆಯಲ್ಲಿ ಕೋಲಾಹಲದ ವಾತಾವರಣ ಸೃಷ್ಟಿಯಾಯಿತು.
ನಿಲುವಳಿ ವಿರೋಧಿಸಿದ ಪಿಡಿಪಿ ಸದಸ್ಯ ಮೀರ್ ಮೊಹಮದ್ ಫಯಾಜ್ ಸಂವಿಧಾನದ ಪ್ರತಿಯನ್ನು ರಾಜ್ಯಸಭೆಯಲ್ಲಿ ಹರಿದು ಹಾಕಿದರು. ಕೂಡಲೇ ಕ್ರಮ ಕೈಗೊಂಡ ಸಭಾಧ್ಯಕ್ಷ ವೆಂಕಯ್ಯ ನಾಯ್ಡು, ‘ನೀವು ಸದನದಿಂದ ಹೊರಗೆ ಹೋಗಿ’ ಎಂದು ಫಯಾಜ್ ಅವರನ್ನು ಹೊರ ಕಳುಹಿಸಿದರು.
ಇದನ್ನೂ ಓದಿ: ಜಮ್ಮು–ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪ್ರಸ್ತಾವ ಮಂಡಿಸಿದ ಅಮಿತ್ ಶಾ
ಸಂವಿಧಾನದ ಪ್ರತಿಯನ್ನು ಹರಿದುಹಾಕಿದ ಪಿಡಿಪಿ ಸದಸ್ಯರ ಕ್ರಮವನ್ನು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಖಂಡಿಸಿದ್ದಾರೆ. ಜತೆಗೆ, ಬಿಜೆಪಿ ಸಂವಿಧಾನದ ಕೊಲೆ ಮಾಡಿದೆ ಎಂದೂ ಆರೋಪಿಸಿದ್ದಾರೆ.
ಇದನ್ನೂ ಓದಿ: ಜಮ್ಮು–ಕಾಶ್ಮೀರ: ಸಂವಿಧಾನದ 370ನೇ ವಿಧಿ ತಿದ್ದುಪಡಿ ಬಗ್ಗೆ ರಾಷ್ಟ್ರಪತಿ ಅಧಿಸೂಚನೆ
ಬಿಎಸ್ಪಿ, ಎಐಎಡಿಎಂಕೆ, ಬಿಜೆಡಿ ಬೆಂಬಲ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಪ್ರಸ್ತಾವಕ್ಕೆ ನಮ್ಮ ಬೆಂಬಲವಿದೆ. ಈ ಮಸೂದೆಗೆ ಸದನದ ಅಂಗೀಕಾರ ಸಿಗಬೇಕು ಎಂದು ರಾಜ್ಯಸಭೆಯಲ್ಲಿ ಬಿಎಸ್ಪಿ ನಾಯಕ ಸತೀಶ್ ಚಂದ್ರ ಮಿಶ್ರಾ ಹೇಳಿದರು. ಪ್ರಾದೇಶಿಕ ಪಕ್ಷಗಳಾದ ತಮಿಳುನಾಡಿನ ಎಐಎಡಿಎಂಕೆ ಮತ್ತು ಒಡಿಶಾದ ಬಿಜೆಡಿ ಸಹ ಬೆಂಬಲ ಸೂಚಿಸಿದೆ.
ಇನ್ನಷ್ಟು...
ಕಾಶ್ಮೀರ ಮತ್ತು 35ಎ, 370: ಬದಲಾಗುತ್ತಾ ಸ್ಥಿತಿಗತಿ
35 ಎ ಕಲಂ ವಿಷಯದಲ್ಲಿ ಎಚ್ಚರದಿಂದ ವ್ಯವಹರಿಸಬೇಕು
‘35-ಎ’ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ: ಸುಪ್ರೀಂ ಕೋರ್ಟ್
ಬಿಳಿ ಬಾವುಟ ತೋರಿಸಿ, ಶವ ತಗೊಂಡು ಹೋಗಿ: ಪಾಕಿಸ್ತಾನಕ್ಕೆ ಸೇನೆಯ ಸೂಚನೆ
ಯೋಧರು, ಉಗ್ರರ ಮೃತದೇಹ ಕೊಂಡೊಯ್ಯಲು ನಿರಾಕರಿಸಿದ ಪಾಕಿಸ್ತಾನ?
ಜಮ್ಮು–ಕಾಶ್ಮೀರದಲ್ಲಿ ಕಟ್ಟೆಚ್ಚರ| ಕಣಿವೆ ತೊರೆಯಲು ಪ್ರವಾಸಿ, ಯಾತ್ರಿಕರಿಗೆ ಸೂಚನೆ
ಸೇನಾ ಕೋಟೆಯಾದ ಶ್ರೀನಗರ: ಆತಂಕ ತೀವ್ರ
ಕಾಶ್ಮೀರದಲ್ಲಿ ಉಗ್ರ ದಾಳಿ ಭೀತಿ: ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.