‘ವಿಭಜನೆಗೊಂಡ ಪಾಕಿಸ್ತಾನ ತನ್ನನ್ನು ಮುಸ್ಲಿಂ ರಾಷ್ಟ್ರವಾಗಿ ಘೋಷಿಸಿಕೊಂಡಿತು. ಧರ್ಮದ ಆಧಾರದಲ್ಲಿ ವಿಭಜನೆಯಾದ ಭಾರತ ಕೂಡ ತನ್ನನ್ನು ಹಿಂದೂ ರಾಷ್ಟ್ರವಾಗಿ ಘೋಷಿಸಿಕೊಳ್ಳಬೇಕಿತ್ತು. ಆದರೆ, ಈ ದೇಶ ಜಾತ್ಯತೀತವಾಗಿ ಉಳಿಯಿತು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಲ್ಲಿ ಹಿಂದೂ, ಸಿಖ್, ಜೈನ, ಬೌದ್ಧ, ಕ್ರೈಸ್ತ, ಪಾರ್ಸಿ, ಖಾಸಿ, ಜೈಂತಿಯಾ ಮತ್ತು ಗಾರೋ ಸಮುದಾಯಗಳ ಜನರು ಚಿತ್ರಹಿಂಸೆ ಅನುಭವಿಸುತ್ತಿದ್ದಾರೆ. ಇವರಿಗೆ ಹೋಗಲು ಬೇರೆ ಜಾಗವೇ ಇಲ್ಲ. ದೇಶ ವಿಭಜನೆ ಸಂದರ್ಭದಲ್ಲಿ ಭಾರತಕ್ಕೆ ಬಂದ ಹಿಂದೂಗಳನ್ನು ಈಗಲೂ ವಿದೇಶಿಯರೆಂದೇ ಪರಿಗಣಿಸಲಾಗುತ್ತಿದೆ. ಇದು ಅತಾರ್ಕಿಕ, ಕಾನೂನುಬಾಹಿರ ಮತ್ತು ಸಹಜ ನ್ಯಾಯಕ್ಕೆ ವಿರುದ್ಧ’ ಎಂದು ನ್ಯಾಯಮೂರ್ತಿಸುದೀಪ್ ರಂಜನ್ ಸೆನ್ ಕಳೆದ ಡಿಸೆಂಬರ್ 10ರಂದು ತೀರ್ಪು ನೀಡಿದ್ದರು.ಕಳೆದ ಮಾರ್ಚ್ನಲ್ಲಿ ಸೆನ್ ನಿವೃತ್ತರಾಗಿದ್ದಾರೆ.