<p><strong>ಲಖನೌ</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್ ಫಲಕಗಳನ್ನು ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿತ್ತು.ಈ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>ಫಲಕಗಳನ್ನು ಪ್ರದರ್ಶಿಸಿರುವ ಪ್ರಕರಣದ ಬಗ್ಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್, ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ನ್ಯಾಯಪೀಠವು, ‘ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/allahabad-high-court-on-banners-of-caa-protesters-710817.html" target="_blank">ಗಲಭೆ ಆರೋಪಿಗಳ ಚಿತ್ರವಿರುವ ಬ್ಯಾನರ್ ಸಲ್ಲದು: ಅಲಹಾಬಾದ್ ಹೈಕೋರ್ಟ್ ಆದೇಶ</a></p>.<p>ಆರೋಪಿಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ವಿಭಾಗೀಯ ನ್ಯಾಯಪೀಠವು ಸ್ವಪ್ರೇರಣೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ್ದು, ಮಾರ್ಚ್ 9 ಸೋಮವಾರ ಮಧ್ಯಾಹ್ನ 2 ಗಂಟೆಗೆತೀರ್ಪು ಕಾಯ್ದಿರಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್ ಫಲಕಗಳನ್ನು ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿತ್ತು.ಈ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>ಫಲಕಗಳನ್ನು ಪ್ರದರ್ಶಿಸಿರುವ ಪ್ರಕರಣದ ಬಗ್ಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್, ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ನ್ಯಾಯಪೀಠವು, ‘ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/allahabad-high-court-on-banners-of-caa-protesters-710817.html" target="_blank">ಗಲಭೆ ಆರೋಪಿಗಳ ಚಿತ್ರವಿರುವ ಬ್ಯಾನರ್ ಸಲ್ಲದು: ಅಲಹಾಬಾದ್ ಹೈಕೋರ್ಟ್ ಆದೇಶ</a></p>.<p>ಆರೋಪಿಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ವಿಭಾಗೀಯ ನ್ಯಾಯಪೀಠವು ಸ್ವಪ್ರೇರಣೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ್ದು, ಮಾರ್ಚ್ 9 ಸೋಮವಾರ ಮಧ್ಯಾಹ್ನ 2 ಗಂಟೆಗೆತೀರ್ಪು ಕಾಯ್ದಿರಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>