ಫಲಕಗಳನ್ನು ಪ್ರದರ್ಶಿಸಿರುವ ಪ್ರಕರಣದ ಬಗ್ಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್, ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ನ್ಯಾಯಪೀಠವು, ‘ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ’ ಎಂದು ಹೇಳಿದ್ದಾರೆ.