‘ಪ್ರಜಾವಾಣಿ’ಯಲ್ಲಿ ಭಾನುವಾರ ಪ್ರಕಟಗೊಂಡ ‘ಜಿ.ಪಂ ಕಾಂಗ್ರೆಸ್ ಸದಸ್ಯರ ದಬ್ಬಾಳಿಕೆ’ ವರದಿಗೆ ಪ್ರತಿಕ್ರಿಯಿಸಿರುವ ಅವರು, ‘ಕಗ್ಗಲೀಪುರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದೆ. ಅದನ್ನು ಸಹಿಸದ ಎದುರಾಳಿ ಪಕ್ಷದವರು ಶ್ರೀಧರ್ ಅವರನ್ನು ಬಳಸಿಕೊಂಡು, ನನ್ನನ್ನು ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ನ್ಯಾಯದ ಮಾರ್ಗದಲ್ಲಿ ಸಾಗುತ್ತಿರುವ ನಾನು, ಇದಕ್ಕೆಲ್ಲ ಹೆದರುವುದಿಲ್ಲ’ ಎಂದರು.