<p><strong>ಲಖನೌ</strong>: ಉತ್ತರಪ್ರದೇಶದ ಶಹರಣ್ ಪುರ್, ಖುಷಿನಗರ್ ಜಿಲ್ಲೆ ಮತ್ತು ಉತ್ತರಾಖಂಡದ ರೂರ್ಕಿಯಲ್ಲಿ ಶುಕ್ರವಾರನಕಲಿ ಮದ್ಯ ಸೇವಿಸಿ 38 ಮಂದಿ ಸಾವಿಗೀಡಾಗಿದ್ದಾರೆ.</p>.<p>ಉತ್ತರ ಪ್ರದೇಶದ ಶಹರಣ್ ಪುರ್ನಲ್ಲಿ ಈ ಘಟನೆ ಮೊದಲು ವರದಿಯಾಗಿದ್ದು 16 ಮಂದಿ ಸಾವನ್ನಪ್ಪಿದ್ದಾರೆ. ಹರಿದ್ವಾರದಲ್ಲಿ 12 ಮಂದಿ ಸಾವಿಗೀಡಾಗಿರುವುದಾಗಿ <a href="https://www.news18.com/news/india/hooch-tragedy-15-dead-in-saharanpur-12-in-haridwar-after-consuming-spurious-liquor-2029607.html" target="_blank">ನ್ಯೂಸ್ 18</a> ವರದಿ ಮಾಡಿದೆ.</p>.<p>ಶಹರಣ್ಪುರದ ಉಮಾಹಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಅಸ್ವಸ್ಥರಾದ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇವರು ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿತ್ತು.</p>.<p>ಖುಷಿ ನಗರ ಜಿಲ್ಲೆಯಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ ಎಂದು ಖುಷಿನಗರ್ ಜಿಲ್ಲಾ ಮೆಜಿಸ್ಟ್ರೇಟ್ ಅನಿಲ್ ಕುಮಾರ್ ಹೇಳಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ಈಗಾಗಲೇ ಬಂಧಿಸಿದ್ದು, ತನಿಖೆ ಮುಂದುವರಿದಿದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.</p>.<p>ಇನ್ನೊಂದು ಘಟನೆಯಲ್ಲಿ ಉತ್ತರಾಖಂಡದ ರೂರ್ಕಿಯಲ್ಲಿ ನಕಲಿ ಮದ್ಯ ಸೇವಿಸಿ 14 ಮಂದಿ ಸಾವಿಗೀಡಾಗಿದ್ದಾರೆ.ಈ ಪ್ರಕರಣದಲ್ಲಿ 13 ಮಂದಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಲಾಗಿದೆ.</p>.<p>ಉತ್ತರಪ್ರದೇಶದಲ್ಲಿ ನಡೆದ ಮದ್ಯ ದುರಂತದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದು, ದುರಂತದಲ್ಲಿ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರಪ್ರದೇಶದ ಶಹರಣ್ ಪುರ್, ಖುಷಿನಗರ್ ಜಿಲ್ಲೆ ಮತ್ತು ಉತ್ತರಾಖಂಡದ ರೂರ್ಕಿಯಲ್ಲಿ ಶುಕ್ರವಾರನಕಲಿ ಮದ್ಯ ಸೇವಿಸಿ 38 ಮಂದಿ ಸಾವಿಗೀಡಾಗಿದ್ದಾರೆ.</p>.<p>ಉತ್ತರ ಪ್ರದೇಶದ ಶಹರಣ್ ಪುರ್ನಲ್ಲಿ ಈ ಘಟನೆ ಮೊದಲು ವರದಿಯಾಗಿದ್ದು 16 ಮಂದಿ ಸಾವನ್ನಪ್ಪಿದ್ದಾರೆ. ಹರಿದ್ವಾರದಲ್ಲಿ 12 ಮಂದಿ ಸಾವಿಗೀಡಾಗಿರುವುದಾಗಿ <a href="https://www.news18.com/news/india/hooch-tragedy-15-dead-in-saharanpur-12-in-haridwar-after-consuming-spurious-liquor-2029607.html" target="_blank">ನ್ಯೂಸ್ 18</a> ವರದಿ ಮಾಡಿದೆ.</p>.<p>ಶಹರಣ್ಪುರದ ಉಮಾಹಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಅಸ್ವಸ್ಥರಾದ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇವರು ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿತ್ತು.</p>.<p>ಖುಷಿ ನಗರ ಜಿಲ್ಲೆಯಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ ಎಂದು ಖುಷಿನಗರ್ ಜಿಲ್ಲಾ ಮೆಜಿಸ್ಟ್ರೇಟ್ ಅನಿಲ್ ಕುಮಾರ್ ಹೇಳಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ಈಗಾಗಲೇ ಬಂಧಿಸಿದ್ದು, ತನಿಖೆ ಮುಂದುವರಿದಿದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.</p>.<p>ಇನ್ನೊಂದು ಘಟನೆಯಲ್ಲಿ ಉತ್ತರಾಖಂಡದ ರೂರ್ಕಿಯಲ್ಲಿ ನಕಲಿ ಮದ್ಯ ಸೇವಿಸಿ 14 ಮಂದಿ ಸಾವಿಗೀಡಾಗಿದ್ದಾರೆ.ಈ ಪ್ರಕರಣದಲ್ಲಿ 13 ಮಂದಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಲಾಗಿದೆ.</p>.<p>ಉತ್ತರಪ್ರದೇಶದಲ್ಲಿ ನಡೆದ ಮದ್ಯ ದುರಂತದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದು, ದುರಂತದಲ್ಲಿ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>