<p>ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯಿಂದ ಹೊರಗುಳಿದಿರುವ 15 ಮಂದಿ ಶಾಸಕರು ಪಕ್ಷದಲ್ಲೇ ಉಳಿದುಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>ಟಿಕೆಟ್ ವಂಚಿತ ಶಾಸಕರನ್ನು ಇತರ ಪಕ್ಷದವರು ಸೆಳೆಯುವ ಪ್ರಯತ್ನ ಮಾಡಬಹುದೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ‘ಎಲ್ಲಾ ಪಕ್ಷದವರೂ ಪ್ರಯತ್ನಿಸಲಿ. ಆ ಶಾಸಕರು ನಮ್ಮ ಕುಟುಂಬದವರು. ಅವರು ನಮ್ಮೊಂದಿಗಿರುವ ನಂಬಿಕೆ ಇದೆ’ ಎಂದಿದ್ದಾರೆ.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅತಿಶಿ, ದಿಲೀಪ್ ಪಾಂಡೆ ಮತ್ತು ರಾಘವ್ ಛದಾ ಸೇರಿದಂತೆ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ 24 ಮಂದಿಗೆ ಪಕ್ಷ ಟಿಕೆಟ್ ನೀಡಿದೆ.</p>.<p><strong>ರಾಜಕೀಯವನ್ನು ಬಜೆಟ್ನಿಂದ ದೂರವಿಡಿ:</strong>ರಾಜಕೀಯವನ್ನು ದೂರವಿರಿಸಿ, ರಾಷ್ಟ್ರ ರಾಜಧಾನಿಗೆ ಒಳ್ಳೆಯದಾಗುವ ಬಜೆಟ್ ಮಂಡಿಸುವಂತೆ ಅರವಿಂದ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಮಾಲಿನ್ಯ ನಿಯಂತ್ರಣಕ್ಕೆ ಮತ್ತು ಸ್ವಚ್ಛತೆಗಾಗಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯಿಂದ ಹೊರಗುಳಿದಿರುವ 15 ಮಂದಿ ಶಾಸಕರು ಪಕ್ಷದಲ್ಲೇ ಉಳಿದುಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p>.<p>ಟಿಕೆಟ್ ವಂಚಿತ ಶಾಸಕರನ್ನು ಇತರ ಪಕ್ಷದವರು ಸೆಳೆಯುವ ಪ್ರಯತ್ನ ಮಾಡಬಹುದೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ‘ಎಲ್ಲಾ ಪಕ್ಷದವರೂ ಪ್ರಯತ್ನಿಸಲಿ. ಆ ಶಾಸಕರು ನಮ್ಮ ಕುಟುಂಬದವರು. ಅವರು ನಮ್ಮೊಂದಿಗಿರುವ ನಂಬಿಕೆ ಇದೆ’ ಎಂದಿದ್ದಾರೆ.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅತಿಶಿ, ದಿಲೀಪ್ ಪಾಂಡೆ ಮತ್ತು ರಾಘವ್ ಛದಾ ಸೇರಿದಂತೆ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ 24 ಮಂದಿಗೆ ಪಕ್ಷ ಟಿಕೆಟ್ ನೀಡಿದೆ.</p>.<p><strong>ರಾಜಕೀಯವನ್ನು ಬಜೆಟ್ನಿಂದ ದೂರವಿಡಿ:</strong>ರಾಜಕೀಯವನ್ನು ದೂರವಿರಿಸಿ, ರಾಷ್ಟ್ರ ರಾಜಧಾನಿಗೆ ಒಳ್ಳೆಯದಾಗುವ ಬಜೆಟ್ ಮಂಡಿಸುವಂತೆ ಅರವಿಂದ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಮಾಲಿನ್ಯ ನಿಯಂತ್ರಣಕ್ಕೆ ಮತ್ತು ಸ್ವಚ್ಛತೆಗಾಗಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>