ಕರ್ನಾಟಕ, ಮಹಾರಾಷ್ಟ್ರ, ತ್ರಿಪುರಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ವಾಟ್ಸ್ಆ್ಯಪ್ನಲ್ಲಿ ಹರಿದಾಡಿದ ಮಕ್ಕಳ ಕಳ್ಳತನದ ಸುಳ್ಳು ಸಂದೇಶಗಳು ಅನೇಕ ಮುಗ್ಧ ಜೀವಗಳನ್ನು ಬಲಿ ಪಡೆದಿವೆ. ಹಿಂಸಾತ್ಮಕ ಘಟನೆಗಳು ನಡೆದಾಗ ಕಂಪನಿ ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದಿಂದ ನುಣುಚಿಕೊಳ್ಳಲಾಗದು. ದುಷ್ಕೃತ್ಯಗಳಿಗೆ ಅವಕಾಶ ಕೊಡುವ ವೇದಿಕೆಯಾಗಬಾರದು ಎಂದು ಸರ್ಕಾರ ಎಚ್ಚರಿಕೆ ನೀಡಿತ್ತು.