2014ರಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವೇದ ಶಿಕ್ಷಣ ಮಂಡಳಿ ಸ್ಥಾಪಿಸಿ, ವೇದ ಶಾಲೆಗಳನ್ನು ಅವುಗಳ ವ್ಯಾಪ್ತಿಗೆ ತಂದು, ಎಲ್ಲ ಪರೀಕ್ಷಾ ಮಂಡಳಿಗಳಂತೆ ಈ ಮಂಡಳಿಗೂ ಅಧಿಕೃತ ಮಾನ್ಯತೆ ನೀಡಬೇಕು ಎಂಬ ಬೇಡಿಕೆ ಇತ್ತು. ಸಿಬಿಎಸ್ಇ ಮಾದರಿಯಲ್ಲಿ ವೇದ ಶಿಕ್ಷಣ ಮಂಡಳಿ ಸ್ಥಾಪಿಸುವಂತೆ 2015ರಲ್ಲಿ ಯೋಗಗುರು ಬಾಬಾ ರಾಮದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ, ಮಾನವ ಸಂಪನ್ಮೂಲ ಸಚಿವಾಲಯ ಆಗ ಈ ಪ್ರಸ್ತಾವವನ್ನು ತಿರಸ್ಕರಿಸಿತ್ತು.