ಲಖನೌ:ಬಜರಂಗದಳಕ್ಕೆ ಸೇರಿದ ನೂರಾರು ಕಾರ್ಯಕರ್ತರಿಗೆ ಅಯೋಧ್ಯೆಯ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ತ್ರಿಶೂಲ ದೀಕ್ಷೆ ನೀಡಲಾಯಿತು.
ಇದೇ ವೇಳೆ ಕಾರ್ಯಕರ್ತರು ರಾಮ ಮಂದಿರ ನಿರ್ಮಾಣಕ್ಕೆ ಪಣತೊಡುವ ಪ್ರತಿಜ್ಞೆ ಮಾಡಿದರು.
‘ಕಾರ್ಯಕರ್ತರು ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕಾಗಿಯಾವುದೇ ತ್ಯಾಗಕ್ಕಾದರೂ ತಯಾರಿರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ’ ಎಂದು ವಿಎಚ್ಪಿ ಮೂಲಗಳು ತಿಳಿಸಿವೆ.
ಸಂತರ ಮಾರ್ಗದರ್ಶನದಲ್ಲಿ ಅಯೋಧ್ಯೆವರೆಗೆ ಮೆರವಣಿಗೆಯಲ್ಲಿ ಭಾಗವಹಿಸಲು ತಯಾರಿರುವ 25 ಸಾವಿರ ಕಾರ್ಯಕರ್ತರನ್ನು ನೇಮಿಸಿಕೊಳ್ಳುವ ಯೋಜನೆಯನ್ನು ವಿಎಚ್ಪಿ ಹೊಂದಿದೆ.