ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ: ಪಾರಾದ ಪ್ರಯಾಣಿಕರು

Last Updated 7 ಜೂನ್ 2019, 1:08 IST
ಅಕ್ಷರ ಗಾತ್ರ

ಅಮರಾವತಿ: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ (ಎಸಿ) ಕರ್ನೂಲ್‌ ಜಿಲ್ಲೆಯ ಎನುಗುಮರಿ ಗ್ರಾಮದ ಬಳಿ ಗುರುವಾರ ನಸುಕಿನಲ್ಲಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 26 ಮಂದಿ ಪ್ರಯಾಣಿಕರು ಪಾರಾಗಿದ್ದಾರೆ.

‘ಪ್ರಯಾಣಿಕರೊಬ್ಬರು ಬಸ್ಸಿನ ಹಿಂಬದಿಯಿಂದ ಬರುತ್ತಿದ್ದ ಹೊಗೆಯನ್ನು ಗಮನಿಸಿ, ಚಾಲಕನಿಗೆ ಮಾಹಿತಿ ನೀಡಿದರು. ತಕ್ಷಣವೇಚಾಲಕ ಬಸ್ಸು ನಿಲ್ಲಿಸಿದರು. ಹೊಗೆ ದಟ್ಟವಾಗುತ್ತಿದ್ದಂತೆ ಕೆಲವು ಪ್ರಯಾಣಿಕರು ಬಸ್ಸಿನಿಂದ ಜಿಗಿದರು. ಕೆಲವೇ ಕ್ಷಣಗಳಲ್ಲಿ ಇಡೀ ಬಸ್ಸು ಹೊತ್ತಿ ಉರಿಯಿತು’ ಎಂದುಇಲ್ಲಿನ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುಲಕಣ್ಣ ಮಾಹಿತಿ ನೀಡಿದರು.

ಅಗ್ನಿ ಶಾಮಕದಳ ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ ಬಸ್ಸು ಸಂಪುರ್ಣ ಹೊತ್ತಿ ಉರಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT