ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಸಮಾಜದಲ್ಲಿ ಭೀತಿ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕಾನೂನು ಪ್ರಕಾರವೇ ಪೊಲೀಸರು ಬಂಧಿಸಿರುವ ವ್ಯಕ್ತಿಗಳು ಯಾವುದೇ ಸನ್ನಿವೇಶದಲ್ಲಿ ಜೀವ ಕಳೆದುಕೊಂಡರೂ ಅದು ಖಂಡಿತ ಕೆಟ್ಟ ಸಂದೇಶ ನೀಡುತ್ತದೆ ಎಂದು ಆಯೋಗದ ಮುಖ್ಯಸ್ಥ ನ್ಯಾಯಮೂರ್ತಿ ಎಚ್.ಎಲ್. ದತ್ತು ಹೇಳಿದ್ದಾರೆ.