ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ತಡೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ನೀತಿ ಸಂಹಿತೆ ಉಲ್ಲಂಘನೆ ಆರೋಪ
Last Updated 11 ಮೇ 2018, 8:41 IST
ಅಕ್ಷರ ಗಾತ್ರ

ಬೆಂಗಳೂರು: 'ಆರ್.ಆರ್.ನಗರ ಕ್ಷೇತ್ರದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಈ ಕ್ಷೇತ್ರದ ಚುನಾವಣಾ ಫಲಿತಾಂಶ ತಡೆಹಿಡಿಯಬೇಕು' ಎಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.

ನಗರದ "ಸಮರ್ಪಣಾ" ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಹಾಗೂ ದಯಾನಂದ ತಿಪ್ಪೇರುದ್ರಪ್ಪ ಶುಕ್ರವಾರ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

'ಅರ್ಜಿ ಮೇ 15 ಮಂಗಳವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ' ಎಂದು ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ 'ಪ್ರಜಾವಾಣಿ'ಗೆ ತಿಳಿಸಿದರು.

ಅರ್ಜಿಯಲ್ಲಿ ಏನಿದೆ?:

* 2018 ರ ಮೇ 9 ರಂದು ಜಾಲಹಳ್ಳಿಯ ಫ್ಲ್ಯಾಟ್ ನಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿದ್ದನ್ನು ಪತ್ತೆ ಹಚ್ಚಲಾಗಿದೆ.

* ಈ ಸಂಬಂಧ ಮುಖ್ಯ ಚುನಾವಣಾ ಅಧಿಕಾರಿ, ಸ್ಥಳೀಯ ಶಾಸಕ ಮುನಿರತ್ನ ನಾಯ್ಡು ಸೇರಿದಂತೆ ೧೦ ಜನರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

* ಇದು ವ್ಯಾಪಕ ಭ್ರಷ್ಟಚಾರದ ಪ್ರತೀಕ. ಜನತಾ ಪ್ರಾತಿನಿಧ್ಯ ಕಾಯ್ದೆ -1951ರ ಕಲಂ 123 ರ ಸ್ಪಷ್ಟ ಉಲ್ಲಂಘನೆ.

* ಆದ್ದರಿಂದ ಈ ಕ್ಷೇತ್ರದ ಮತ ಪೆಟ್ಟಿಗೆಗಳನ್ನು ತೆರೆದು ಮತ ಎಣಿಕೆ ನಡೆಸಬಾರದು. ಈ ಅರ್ಜಿ ಇತ್ಯರ್ಥ ಆಗುವವರೆಗೆ ಫಲಿತಾಂಶ ತಡೆ ಹಿಡಿಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT