ಪ್ರಧಾನಿ ನರೇಂದ್ರ ಮೋದಿ ಅವರ ಮನದ ಮಾತಿನಿಂದ ಬಡವರ ಹಸಿವು ನೀಗುವುದಿಲ್ಲ. ವಿದೇಶದಲ್ಲಿರುವ ಕಪ್ಪು ಹಣ ತಂದು ದೇಶದ ಪ್ರತಿಯೊಬ್ಬ ವ್ಯಕ್ತಿಯ ಖಾತೆಗೆ ₨ 15 ಲಕ್ಷ ಜಮೆ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದರು. ಅದು ಸುಳ್ಳಾಗಿದೆ. ಲೂಟಿ ಮಾಡಿ ಜೈಲಿಗೆ ಹೋದವರನ್ನು ಪಕ್ಕದಲ್ಲಿ ಇಟ್ಟುಕೊಂಡು ನಮ್ಮ ಸರ್ಕಾರವನ್ನು ತೆಗಳುವ ನೈತಿಕತೆ ನರೇಂದ್ರ ಮೋದಿಗಿಲ್ಲ ಎಂದ ಅವರು, ನೀರಜ್ ಮೋದಿ, ಲಲಿತ್ ಮೋದಿ, ವಿಜಯ ಮಲ್ಯ ಅವರು ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ತೆರಳಲು ನರೇಂದ್ರ ಮೋದಿ ಅವರ ಕುಮ್ಮಕ್ಕು ಕಾರಣ ಎಂದು ಆರೋಪಿಸಿದರು.