ನವದೆಹಲಿ: ದೇಶ ರಕ್ಷಣೆಗಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಫೆಬ್ರುವರಿ 14ರಂದು ಪುಲ್ವಾಮದಲ್ಲಿ ನಡೆದ ದಾಳಿಗೆ ಪ್ರತೀಕಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸರ್ವಾಧಿಕಾರ ನೀಡಿದ್ದರು. ಸೇನಾಪಡೆಗೆ ದೇಶದ ಬೆಂಬಲವಿದೆ ಎಂದಿದ್ದಾರೆ ಸಚಿವರು.