<p><strong>ಕೊಲ್ಕತ್ತ:</strong> ದೇಶದ ಪ್ರಧಾನ ಮಂತ್ರಿ ಸ್ಥಾನಕ್ಕೆ ಅಕಸ್ಮಾತ್ ಬಂಗಾಳದವರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದಲ್ಲಿ ಅದಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಕ್ತ ವ್ಯಕ್ತಿ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅಭಿಪ್ರಾಯಪಟ್ಟಿದ್ದಾರೆ.</p>.<p>ತೃಣಮೂಲ ಕಾಂಗ್ರೆಸ್ನಅಧ್ಯಕ್ಷೆಯಾಗಿರುವ ಮಮತಾ ಅವರಿಗೆ ಜನ್ಮದಿನದ ಶುಭಾಶಯ ಕೋರಿರುವ ಘೋಷ್, ದೇವರು ನಿಮಗೆ ಯಶಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ. ಏಕೆಂದರೆ ನಮ್ಮ ರಾಜ್ಯದ ಭವಿಷ್ಯ ನಿಮ್ಮ ಯಶಸ್ಸಿನ ಮೇಲೆ ನಿಂತಿದೆ ಎಂದು ಹೇಳಿದ್ದಾರೆ.</p>.<p>ಮಮತಾ ಅವರು ಆರೋಗ್ಯವಾಗಿರಬೇಕು. ಏಕೆಂದರೆ ಅವರು ಉತ್ತಮ ಆಡಳಿತ ನಡೆಸುತ್ತಾರೆ. ಇದೀಗ ಬಂಗಾಳದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆ ಇದ್ದಲ್ಲಿ ಮಮತಾ ಬ್ಯಾನರ್ಜಿ ಅವರೇ ಮೊದಲ ಆಯ್ಕೆ. ಈ ಹಿಂದೆ ಜ್ಯೋತಿ ಬಸು ಕೂಡ ಪ್ರಧಾನಮಂತ್ರಿ ಆಗಬಹುದಿತ್ತು. ಆದರೆ ಪಕ್ಷದವರೇ ಬಿಡಲಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರಣವ್ ಮುಖರ್ಜಿ ಅವರು ರಾಷ್ಟ್ರಪತಿ ಹುದ್ದೆಗೆ ಏರಿದ್ದ ಮೊದಲ ಬೆಂಗಾಳಿ ಎಂಬುದು ಕೂಡ ಗಮನಾರ್ಹ. ಇದೀಗ ಪ್ರಧಾನಮಂತ್ರಿ ಸ್ಥಾನಕ್ಕೆ ಕಾಲ ಒದಗಿ ಬಂದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತ:</strong> ದೇಶದ ಪ್ರಧಾನ ಮಂತ್ರಿ ಸ್ಥಾನಕ್ಕೆ ಅಕಸ್ಮಾತ್ ಬಂಗಾಳದವರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದಲ್ಲಿ ಅದಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಕ್ತ ವ್ಯಕ್ತಿ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅಭಿಪ್ರಾಯಪಟ್ಟಿದ್ದಾರೆ.</p>.<p>ತೃಣಮೂಲ ಕಾಂಗ್ರೆಸ್ನಅಧ್ಯಕ್ಷೆಯಾಗಿರುವ ಮಮತಾ ಅವರಿಗೆ ಜನ್ಮದಿನದ ಶುಭಾಶಯ ಕೋರಿರುವ ಘೋಷ್, ದೇವರು ನಿಮಗೆ ಯಶಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ. ಏಕೆಂದರೆ ನಮ್ಮ ರಾಜ್ಯದ ಭವಿಷ್ಯ ನಿಮ್ಮ ಯಶಸ್ಸಿನ ಮೇಲೆ ನಿಂತಿದೆ ಎಂದು ಹೇಳಿದ್ದಾರೆ.</p>.<p>ಮಮತಾ ಅವರು ಆರೋಗ್ಯವಾಗಿರಬೇಕು. ಏಕೆಂದರೆ ಅವರು ಉತ್ತಮ ಆಡಳಿತ ನಡೆಸುತ್ತಾರೆ. ಇದೀಗ ಬಂಗಾಳದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆ ಇದ್ದಲ್ಲಿ ಮಮತಾ ಬ್ಯಾನರ್ಜಿ ಅವರೇ ಮೊದಲ ಆಯ್ಕೆ. ಈ ಹಿಂದೆ ಜ್ಯೋತಿ ಬಸು ಕೂಡ ಪ್ರಧಾನಮಂತ್ರಿ ಆಗಬಹುದಿತ್ತು. ಆದರೆ ಪಕ್ಷದವರೇ ಬಿಡಲಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರಣವ್ ಮುಖರ್ಜಿ ಅವರು ರಾಷ್ಟ್ರಪತಿ ಹುದ್ದೆಗೆ ಏರಿದ್ದ ಮೊದಲ ಬೆಂಗಾಳಿ ಎಂಬುದು ಕೂಡ ಗಮನಾರ್ಹ. ಇದೀಗ ಪ್ರಧಾನಮಂತ್ರಿ ಸ್ಥಾನಕ್ಕೆ ಕಾಲ ಒದಗಿ ಬಂದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>