ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದ್ದರೆ ಪಾಕ್‌ಗೆ ಹೋಗಲಿ: ಸತೀಶ್ ಗೌತಮ್ 

Last Updated 10 ಫೆಬ್ರುವರಿ 2020, 9:33 IST
ಅಕ್ಷರ ಗಾತ್ರ

ಅಲಿಗಡ: ಭಾರತದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ ಎಂದಾದರೆ ಸುಮಯ್ಯಾ ರಾಣಾ ಪಾಕಿಸ್ತಾನಕ್ಕೆ ಹೋಗಲಿ ಎಂದು ಅಲಿಘಡ ಸಂಸದ, ಬಿಜೆಪಿ ನಾಯಕ ಸತೀಶ್ ಕುಮಾರ್ ಗೌತಮ್ ಹೇಳಿದ್ದಾರೆ.

ಅಲಿಗಡದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕವಿ ಮುನಾವರ್ ರಾಣಾ ಅವರ ಪುತ್ರಿ ಸುಮಯ್ಯಾ ರಾಣಾ, ದೇಶದಲ್ಲಿ ಹಿಂಸಾತ್ಮಕ ವಾತಾವರಣ ಇದೆ. ಈ ರೀತಿಯ ವಾತಾವರಣ ಉಸಿರುಗಟ್ಟಿಸುತ್ತದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಗೌತಮ್, ಸುಮಯ್ಯಾ ಅವರಿಗೆ ಈ ದೇಶ ಉಸಿರುಗಟ್ಟಿಸುತ್ತಿದೆ ಎಂದಾದರೆ ಪಾಕಿಸ್ತಾನಕ್ಕೆ ಹೋಗಲು ಅವರಿಗೆ ಸಾಕಷ್ಟು ದಾರಿಗಳಿವೆ. ಭಾರತದಲ್ಲಿ ಎಲ್ಲರೂ ಮುಕ್ತವಾಗಿ ಮಾತನಾಡಬಹುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT