ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಈವರೆಗೆ 77103 ಸೋಂಕು ಪ್ರಕರಣ, 4021 ಮಂದಿ ಸಾವು

Last Updated 25 ಮೇ 2020, 17:04 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ:ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೆ 77103 ಪ್ರಕರಣಗಳು ವರದಿಯಾಗಿವೆ. 57720 ಮಂದಿ ಗುಣಮುಖರಾಗಿದ್ದು, 4021 ಮಂದಿ ಸಾವಿಗೀಡಾಗಿದ್ದಾರೆ.

ಗುಜರಾತಿನಲ್ಲಿ ಸೋಮವಾರ 405 ಹೊಸ ಪ್ರಕರಣಗಳು ವರದಿಯಾಗಿದ್ದು ಪ್ರಕರಣಗಳ ಸಂಖ್ಯೆ 14,468 ಕ್ಕೇರಿದೆ. 30 ರೋಗಿಗಳು ಇಂದು ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 888ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಗೋವಾದಲ್ಲಿ ಇವತ್ತು ಒಬ್ಬ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 67ಕ್ಕೇರಿದೆ. 48 ಸಕ್ರಿಯ ಪ್ರಕರಣಗಳು ಇಲ್ಲಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 10 ವಾರಗಳಿಂದ ಇಲ್ಲಿಯವರೆಗೆ 1.30 ಲಕ್ಷ ಪರೀಕ್ಷೆಗಳು ನಡೆದಿವೆ ಎಂದು ಪವರ್ ಆ್ಯಂಡ್ ಇನ್ಫಾರ್ಮೇಷನ್‌ನ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ದೆಹಲಿಯಲ್ಲಿ ಇಂದು ಸಿಆರ್‌ಪಿಎಫ್‌ನ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ದೃಢಪಟ್ಟಿದೆ. ಇಲ್ಲಿ 141 ಸಕ್ರಿಯ ಪ್ರಕರಣಗಳಿದ್ದು 220 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು 363 ಪ್ರಕರಣಗಳು ಈವರೆಗೆ ವರದಿಯಾಗಿದೆ.

ತಮಿಳುನಾಡಿನಲ್ಲಿ 7 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 118ಕ್ಕೇರಿದೆ. ಒಂದೇ ದಿನಕ್ಕೆ 805 ಪ್ರಕರಣಗಳು ವರದಿಯಾಗಿದ್ದು, ಪ್ರಕರಣಗಳ ಸಂಖ್ಯೆ 17,000 ದಾಟಿದೆ.ಪಂಜಾಬ್‍ನಲ್ಲಿ 21 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2081ಕ್ಕೇರಿದೆ. ಕೇರಳದಲ್ಲಿ ಸೋಮವಾರ 49 ಹೊಸ ಪ್ರಕರಣಗಳು ಪತ್ತೆಯಾಗಿವೆ. 532 ಮಂದಿ ಇಲ್ಲಿಯವರೆಗೆ ಗುಣಮುಖರಾಗಿದ್ದು, 359 ಸಕ್ರಿಯ ಪ್ರಕರಣಗಳು ಇಲ್ಲಿವೆ.

ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗುತ್ತಿದೆ. ಪರಿಣಾಮವಾಗಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಭಾನುವಾರ 11ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಬಂದಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೆಚ್ಚು ಕಡಿಮೆ 7 ಸಾವಿರದಷ್ಟು (6977) ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರೆಗಿನ ಒಂದು ದಿನ ಗರಿಷ್ಠ ಸಂಖ್ಯೆ. ಹೀಗಾಗಿ ದೇಶದಲ್ಲಿ ಸಹಜವಾಗಿಯೇ ಆತಂಕ ಮನೆ ಮಾಡಿದೆ.

ಈಗ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 1,38,845 ಏರಿದೆ. ಇದರಲ್ಲಿ 77103 ಸಕ್ರೀಯ ಪ್ರಕರಣಗಳಿದ್ದು, 57720 ಮಂದಿ ಗುಣಮುಖರಾಗಿದ್ದಾರೆ. 4021 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ ಒಂದೇ ದಿನ 154 ಮಂದಿ ಮೃತಪಟ್ಟಿದ್ದಾರೆ.

50 ಸಾವಿರ ಗಡಿ ದಾಟಿದ ಮಹಾರಾಷ್ಟ್ರ: ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲೇ ಇದೆ. ಭಾನುವಾರ ಮಹಾರಾಷ್ಟ್ರವೊಂದರಲ್ಲೇ 3000 ‍ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆಯನ್ನು 50 ಸಾವಿರದ ಗಡಿ ದಾಟಿಸಿದೆ. ಕೇವಲ ನಾಲ್ಕು ದಿನಗಳಲ್ಲಿ ಅಲ್ಲಿ 10 ಸಾವಿರ ಸೋಂಕು ಪ್ರಕರಣಗಳು ವರದಿಯಾಗಿವೆ. ಭಾನುವಾರ ಒಂದೇ ದಿನ ಅಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಮುಂಬೈನ ಧಾರಾವಿ ಕೊಳೆಗೇರಿಗೆ ಸೋಂಕು ಪ್ರವೇಶಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ತಳ್ಳಿದೆ.

ಇದೇ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದ್ದಾರೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ.

ಇನ್ನು ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು (16277 ಸೋಂಕಿತರು) ಎರಡನೇ ಸ್ಥಾನದಲ್ಲಿದ್ದಾರೆ, ಗುಜರಾತ್‌ (14056 ಸೋಂಕಿತರು) ಮೂರನೇ ಸ್ಥಾನದಲ್ಲಿ ಸ್ಥಿತವಾಗಿದೆ.

ಚಂಡೀಗಡದಲ್ಲಿ ಮಗು ಸಾವು: ಮೂರು ವರ್ಷದ ಮಗು ಚಂಡೀಗಡದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಸಾವಿಗೀಡಾಗಿದೆ. ದೇಶದಲ್ಲಿ ಕೊರೊನಾ ವೈರಸ್‌ನಿಂದ ಸಾವಿಗೀಡಾದ ಅತಿ ಕಿರಿಯ ವಯಸ್ಸಿನ ಮಗು ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT