ವಿಧಿವಿಜ್ಞಾನ ತಜ್ಞರು ಮೃತ ಆರೋಪಿಗಳ ಸಂಬಂಧಿಕರನ್ನು ಭೇಟಿ ಮಾಡಿ ಅವರ ಹೇಳಿಕೆ ಪಡೆದುಕೊಂಡಿದ್ದರು. ಮರಣೋತ್ತರ ಪರೀಕ್ಷೆಯ ವರದಿಯನ್ನು ತಜ್ಞರು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸುವರು ಎಂದೂ ಹೇಳಿದ್ದಾರೆ. ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.