2016ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಜಾಕ್ ಅವರ ವಿರುದ್ಧ ಸ್ಪರ್ಧಿಸಿದ್ದ ಸುರೇಂದ್ರನ್ 89 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಮತದಾನದಲ್ಲಿ ಅಕ್ರಮ ನಡೆದಿದೆ. ಲೀಗ್ ಮತ್ತು ಸಿಪಿಎಂ ಕಳ್ಳಮತಗಳನ್ನು ಚಲಾಯಿಸಿ ಯುಡಿಎಫ್ ಗೆಲ್ಲುವಂತೆ ಮಾಡಿದ್ದಾರೆ. ಹಾಗಾಗಿತನ್ನನ್ನು ವಿಜಯಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಸುರೇಂದ್ರನ್ ಹೈಕೋರ್ಟ್ ಮೆಟ್ಟಿಲೇರಿದ್ದರು.