ನವದೆಹಲಿ: ಚುನಾವಣೆಯಲ್ಲಿ ಸ್ಪರ್ಧಿಸಲು ನೇತಾರರು ತಮ್ಮ ಅರ್ಹತೆಗಳನ್ನು ಹೇಳಿಕೊಳ್ಳುತ್ತಾರೆ. ಪಕ್ಷದಲ್ಲಿ ತಾವು ಮಾಡಿದ ಕೆಲಸ ಕಾರ್ಯಗಳು, ಜನ ಬೆಂಬಲದ ಬಗ್ಗೆ ಪಕ್ಷದ ಮುಖ್ಯಸ್ಥರಿಗೆ ಮನವರಿಕೆ ಮಾಡಿ ಅಭ್ಯರ್ಥಿ ಸ್ಥಾನ ಗಿಟ್ಟಿಸಲು ಹವಣಿಸುತ್ತಾರೆ.ಇಂತಿರುವಾಗ ಚುನಾವಣೆಗೆ ಸನ್ನದ್ದವಾಗಿರುವ ತೆಲಂಗಾಣದಲ್ಲಿ ಕಾಂಗ್ರೆಸ್ ನೇತಾರ ಬಿಲ್ಲ ಸುಧೀರ್ ರೆಡ್ಡಿ ಅವರ ಅರ್ಹತೆಯ ಬಗ್ಗೆ ಅವರು ನೀಡಿದ ವಿವರಣೆ ಎಲ್ಲರಿಗಿಂತಲೂ ಭಿನ್ನವಾಗಿದೆ.