<p><strong>ನವದೆಹಲಿ:</strong> ಕನಿಷ್ಠ 6–12 ತಾಸು ಮುಂಚಿತವಾಗಿ ಚಂಡಮಾರುತ ಕುರಿತು ಮಾಹಿತಿ ನೀಡುವ ವ್ಯವಸ್ಥೆ ರೂಪಿಸಲು ಭಾರತೀಯ ಹವಾಮಾನ ಇಲಾಖೆ ತಜ್ಞರು, ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ.</p>.<p>ಕಳೆದ ವರ್ಷ ಮುಂಗಾರು ಆರಂಭಕ್ಕೂ ಮುನ್ನ ಬೀಸಿದ ಚಂಡಮಾರುತಗಳನ್ನು ಗ್ರಹಿಸಲು ಸಾಧ್ಯವಾಗಿರಲಿಲ್ಲ. ಅದರಿಂದ ಜಾಗೃತವಾಗಿರುವ ಇಲಾಖೆ ಸಾಕಷ್ಟು ಮುಂಚಿತವಾಗಿ ಮಾಹಿತಿ ಗ್ರಹಿಸಲು ತಯಾರಿ ನಡೆಸಿದೆ.</p>.<p>ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಮತ್ತು ಹವಾಮಾನ ತಜ್ಞರು ಭೂವಿಜ್ಞಾನ ಸಚಿವಾಲಯದ ಇತರ ಇಲಾಖೆಗಳ ಸಹಭಾಗಿತ್ವದಲ್ಲಿ ಚಂಡಮಾರುತ ಮಾದರಿಗಳ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೂಡ ನೆರವು ನೀಡುತ್ತಿದೆ ಎಂದು ಇಲಾಖೆ ಹೆಚ್ಚುವರಿ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.</p>.<p>ಮುಂಗಾರು ಋತುವಿನಲ್ಲಿ ರಾಜ್ಯಗಳಿಗೆ ಹವಾಮಾನ ಬದಲಾವಣೆ ಕುರಿತು ಟ್ವಿಟರ್ ಮೂಲಕ ಮುನ್ನೆಚ್ಚರಿಕಾ ಸಂದೇಶ ರವಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಚಂಡಮಾರುತಕ್ಕೆ 200 ಜನರು ಬಲಿಯಾಗಿದ್ದರು. ರಾಜಸ್ಥಾನ, ಉತ್ತರ ಪ್ರದೇಶದಲ್ಲಿಯೇ 180 ಜನರು ಪ್ರಾಣ ತೆತ್ತಿದ್ದರು.</p>.<p>**</p>.<p><strong>ಏಪ್ರಿಲ್ನಿಂದ ಕಾರ್ಯಾರಂಭ</strong></p>.<p>ಮುಂಗಾರು ಋತು ಆರಂಭಕ್ಕೂ ಮುನ್ನ ಹವಾಮಾನ ಬದಲಾವಣೆ ಬಗ್ಗೆ ಅದರಲ್ಲೂ ವಿಶೇಷವಾಗಿ ಗುಡುಗು, ಸಿಡಿಲುಗಳಿಂದ ಕೂಡಿದ ಚಂಡಮಾರುತಗಳ ಬಗ್ಗೆ ಮುಂಚಿತವಾಗಿ ಮುನ್ಸೂಚನೆ ನೀಡುವ ವ್ಯವಸ್ಥೆ ಇದೇ ಏಪ್ರಿಲ್ನಿಂದ ಕಾರ್ಯಾರಂಭ ಮಾಡಲಿದೆ.</p>.<p>ಮಾರುತಗಳ ಚಲನವಲನಗಳನ್ನು ಸಾಕಷ್ಟು ಮುಂಚಿತವಾಗಿ ಗ್ರಹಿಸುವ ಕಾರ್ಯಾಚರಣೆ ವಿಧಾನವನ್ನು ಭಾರತೀಯ ಹವಾಮಾನ ಇಲಾಖೆ ಅಳವಡಿಸಿಕೊಂಡಿದೆ ಎಂದು ಭೂವಿಜ್ಞಾನ ಸಚಿವಾಲಯದ ರಾಜೀವನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕನಿಷ್ಠ 6–12 ತಾಸು ಮುಂಚಿತವಾಗಿ ಚಂಡಮಾರುತ ಕುರಿತು ಮಾಹಿತಿ ನೀಡುವ ವ್ಯವಸ್ಥೆ ರೂಪಿಸಲು ಭಾರತೀಯ ಹವಾಮಾನ ಇಲಾಖೆ ತಜ್ಞರು, ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ.</p>.<p>ಕಳೆದ ವರ್ಷ ಮುಂಗಾರು ಆರಂಭಕ್ಕೂ ಮುನ್ನ ಬೀಸಿದ ಚಂಡಮಾರುತಗಳನ್ನು ಗ್ರಹಿಸಲು ಸಾಧ್ಯವಾಗಿರಲಿಲ್ಲ. ಅದರಿಂದ ಜಾಗೃತವಾಗಿರುವ ಇಲಾಖೆ ಸಾಕಷ್ಟು ಮುಂಚಿತವಾಗಿ ಮಾಹಿತಿ ಗ್ರಹಿಸಲು ತಯಾರಿ ನಡೆಸಿದೆ.</p>.<p>ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಮತ್ತು ಹವಾಮಾನ ತಜ್ಞರು ಭೂವಿಜ್ಞಾನ ಸಚಿವಾಲಯದ ಇತರ ಇಲಾಖೆಗಳ ಸಹಭಾಗಿತ್ವದಲ್ಲಿ ಚಂಡಮಾರುತ ಮಾದರಿಗಳ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೂಡ ನೆರವು ನೀಡುತ್ತಿದೆ ಎಂದು ಇಲಾಖೆ ಹೆಚ್ಚುವರಿ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.</p>.<p>ಮುಂಗಾರು ಋತುವಿನಲ್ಲಿ ರಾಜ್ಯಗಳಿಗೆ ಹವಾಮಾನ ಬದಲಾವಣೆ ಕುರಿತು ಟ್ವಿಟರ್ ಮೂಲಕ ಮುನ್ನೆಚ್ಚರಿಕಾ ಸಂದೇಶ ರವಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಚಂಡಮಾರುತಕ್ಕೆ 200 ಜನರು ಬಲಿಯಾಗಿದ್ದರು. ರಾಜಸ್ಥಾನ, ಉತ್ತರ ಪ್ರದೇಶದಲ್ಲಿಯೇ 180 ಜನರು ಪ್ರಾಣ ತೆತ್ತಿದ್ದರು.</p>.<p>**</p>.<p><strong>ಏಪ್ರಿಲ್ನಿಂದ ಕಾರ್ಯಾರಂಭ</strong></p>.<p>ಮುಂಗಾರು ಋತು ಆರಂಭಕ್ಕೂ ಮುನ್ನ ಹವಾಮಾನ ಬದಲಾವಣೆ ಬಗ್ಗೆ ಅದರಲ್ಲೂ ವಿಶೇಷವಾಗಿ ಗುಡುಗು, ಸಿಡಿಲುಗಳಿಂದ ಕೂಡಿದ ಚಂಡಮಾರುತಗಳ ಬಗ್ಗೆ ಮುಂಚಿತವಾಗಿ ಮುನ್ಸೂಚನೆ ನೀಡುವ ವ್ಯವಸ್ಥೆ ಇದೇ ಏಪ್ರಿಲ್ನಿಂದ ಕಾರ್ಯಾರಂಭ ಮಾಡಲಿದೆ.</p>.<p>ಮಾರುತಗಳ ಚಲನವಲನಗಳನ್ನು ಸಾಕಷ್ಟು ಮುಂಚಿತವಾಗಿ ಗ್ರಹಿಸುವ ಕಾರ್ಯಾಚರಣೆ ವಿಧಾನವನ್ನು ಭಾರತೀಯ ಹವಾಮಾನ ಇಲಾಖೆ ಅಳವಡಿಸಿಕೊಂಡಿದೆ ಎಂದು ಭೂವಿಜ್ಞಾನ ಸಚಿವಾಲಯದ ರಾಜೀವನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>