ತೆಲಂಗಾಣ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುವುದು ಅವಶ್ಯಕ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಹೇಳಿದ್ದಾರೆ.
ನಗರದಲ್ಲಿ ನಡೆದ ಭಾರತೀಯ ಜನತಾ ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿರ ಅವರು, ಎನ್ಡಿಎ ಸರ್ಕಾರದ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ದೇಶದ ಜನರ ಹಿತಕ್ಕಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೇರುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.
ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಶಕ್ತಿಯಾಗಿ ಹೊರಹೊಮ್ಮಿದೆ ಎಂದೂ ಹೇಳಿದ್ದಾರೆ.
‘ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ ದೇಶವು ಅಂತರರಾಷ್ಟ್ರೀಯ ಮಟ್ಟದಲ್ಲಿ ಶಕ್ತಿಶಾಲಿ ರಾಷ್ಟ್ರದ ಸ್ಥಾನಪಡೆದಿದೆ. ಹೀಗಾಗಿ ಮೋದಿ ಅವರು ಮತ್ತೆ ಅಧಿಕಾರಕ್ಕೇರುವುದು ಬಿಜೆಪಿಗಷ್ಟೇ ಅಲ್ಲ ಭಾರತಕ್ಕೂ ಮಹತ್ವದ ವಿಚಾರ’ ಎಂದು ಅಭಿಪ್ರಾಯಪಟ್ಟರು.