<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಅಪಾಯದ ಮಟ್ಟ ತಲುಪಿದೆ. ಸತತ ನಾಲ್ಕನೇ ದಿನವಾದ ಮಂಗಳವಾರವೂ ವಾಯು ಗುಣಮಟ್ಟ ಕುಸಿತ ಕಂಡಿದ್ದು, ಚಳಿಯೂ ಹೆಚ್ಚಾಗಿದೆ.</p>.<p>ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಿಸಲು ಅಗತ್ಯ ಬಿದ್ದರೆ ಮತ್ತೆ ನಗರದಲ್ಲಿ ಸಮ, ಬೆಸ ಸಂಖ್ಯೆ ವಾಹನ ಸಂಚಾರ ಪದ್ಧತಿ ಜಾರಿಗೆ ತರಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಇದೇ ರೀತಿ ಮುಂದುವರಿದರೆ ಶಾಲೆಗಳಿಗೆ ರಜೆ ಮತ್ತು ಭಾರಿ ವಾಹನ ಸಂಚಾರ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ವಾಯು ಗುಣಮಟ್ಟ ಸೂಚ್ಯಂಕ ಕೂಡ ಗಂಭೀರ ಮಟ್ಟದಲ್ಲಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ದೆಹಲಿ ಸುತ್ತಮುತ್ತ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.</p>.<p><strong>* ಇದನ್ನೂ ಓದಿ:<a href="https://cms.prajavani.net/stories/stateregional/state-likely-have-decline-597318.html">ರಾಜ್ಯದಲ್ಲಿ ಉಷ್ಣಾಂಶ ಕುಸಿತ ಸಾಧ್ಯತೆ</a></strong></p>.<p><strong>ಹೆಪ್ಪುಗಟ್ಟಿದ ದಾಲ್ ಸರೋವರ</strong></p>.<p>ಉತ್ತರ ಭಾರತದ ಬಹುತೇಕ ಕಡೆಗಳಲ್ಲಿ ಶೀತಗಾಳಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.</p>.<p>ಜಮ್ಮು ಮತ್ತು ಕಾಶ್ಮೀರದಲ್ಲಿ 11 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದ್ದು, ಶ್ರೀನಗರದ ಪ್ರಸಿದ್ಧ ದಾಲ್ ಸರೋವರ ಭಾಗಶಃ ಹೆಪ್ಪುಗಟ್ಟಿದೆ.</p>.<p><strong>* ಇದನ್ನೂ ಓದಿ:<a href="https://cms.prajavani.net/stories/stateregional/pollution-597277.html">ವಾಯು ಮಾಲಿನ್ಯ: ಮಂಗಳೂರಿನಲ್ಲೂ ಶುದ್ಧ ಗಾಳಿಯ ಕೊರತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಅಪಾಯದ ಮಟ್ಟ ತಲುಪಿದೆ. ಸತತ ನಾಲ್ಕನೇ ದಿನವಾದ ಮಂಗಳವಾರವೂ ವಾಯು ಗುಣಮಟ್ಟ ಕುಸಿತ ಕಂಡಿದ್ದು, ಚಳಿಯೂ ಹೆಚ್ಚಾಗಿದೆ.</p>.<p>ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಿಸಲು ಅಗತ್ಯ ಬಿದ್ದರೆ ಮತ್ತೆ ನಗರದಲ್ಲಿ ಸಮ, ಬೆಸ ಸಂಖ್ಯೆ ವಾಹನ ಸಂಚಾರ ಪದ್ಧತಿ ಜಾರಿಗೆ ತರಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಇದೇ ರೀತಿ ಮುಂದುವರಿದರೆ ಶಾಲೆಗಳಿಗೆ ರಜೆ ಮತ್ತು ಭಾರಿ ವಾಹನ ಸಂಚಾರ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.</p>.<p>ವಾಯು ಗುಣಮಟ್ಟ ಸೂಚ್ಯಂಕ ಕೂಡ ಗಂಭೀರ ಮಟ್ಟದಲ್ಲಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ದೆಹಲಿ ಸುತ್ತಮುತ್ತ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.</p>.<p><strong>* ಇದನ್ನೂ ಓದಿ:<a href="https://cms.prajavani.net/stories/stateregional/state-likely-have-decline-597318.html">ರಾಜ್ಯದಲ್ಲಿ ಉಷ್ಣಾಂಶ ಕುಸಿತ ಸಾಧ್ಯತೆ</a></strong></p>.<p><strong>ಹೆಪ್ಪುಗಟ್ಟಿದ ದಾಲ್ ಸರೋವರ</strong></p>.<p>ಉತ್ತರ ಭಾರತದ ಬಹುತೇಕ ಕಡೆಗಳಲ್ಲಿ ಶೀತಗಾಳಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.</p>.<p>ಜಮ್ಮು ಮತ್ತು ಕಾಶ್ಮೀರದಲ್ಲಿ 11 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದ್ದು, ಶ್ರೀನಗರದ ಪ್ರಸಿದ್ಧ ದಾಲ್ ಸರೋವರ ಭಾಗಶಃ ಹೆಪ್ಪುಗಟ್ಟಿದೆ.</p>.<p><strong>* ಇದನ್ನೂ ಓದಿ:<a href="https://cms.prajavani.net/stories/stateregional/pollution-597277.html">ವಾಯು ಮಾಲಿನ್ಯ: ಮಂಗಳೂರಿನಲ್ಲೂ ಶುದ್ಧ ಗಾಳಿಯ ಕೊರತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>