ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಯಾವುದೇ ನಿಲುವು ತೆಗೆದುಕೊಂಡರೂ ಕೇರಳ ಸರ್ಕಾರ ಮಧ್ಯಪ್ರವೇಶಿಸಲಿದೆ ಎಂದು ಕೇರಳ ಸಾರಿಗೆ ಸಚಿವ ಎ.ಕೆ.ಶಶಿಧರನ್ ಅವರು ಪ್ರತಿಭಟನಕಾರರಿಗೆ ಮನವರಿಕೆ ಮಾಡಿಕೊಟ್ಟರು. ಒಮ್ಮತದ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರದ ಜೊತೆ ಚರ್ಚೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.