ಪಾಕಿಸ್ತಾನ ಅತಿಕ್ರಮಿಸಿಕೊಂಡಿರುವ ಪ್ರದೇಶದಲ್ಲಿ (ಪಿಒಕೆ) ಆರ್ಥಿಕ ಕಾರಿಡಾರ್ ಯೋಜನೆ ಹಮ್ಮಿಕೊಂಡಿರುವ ಬಗ್ಗೆ ಭಾರತ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಾ ಬಂದಿದೆ. ಕಾರಿಡಾರ್ ಯೋಜನೆಯು ಜಮ್ಮು–ಕಾಶ್ಮೀರದ ಪ್ರದೇಶಗಳಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನವಾಗಿದ್ದು, ಇದನ್ನು ಭಾರತ ವಿರೋಧಿಸುತ್ತದೆ ಎಂದೂರವೀಶ್ ಕುಮಾರ್ ಹೇಳಿದ್ದಾರೆ.