ನವದೆಹಲಿ:‘ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಯುದ್ಧದ ಭೀತಿನಿವಾರಿಸುವಲ್ಲಿ ಭಾರತ ಪ್ರಧಾನ ಪಾತ್ರ ನಿರ್ವಹಿಸಬಲ್ಲದು,’ ಎಂದು ಇರಾನ್ ವಿದೇಶಾಂಗ ಸಚಿವ ಜಾವೇದ್ ಜಾರಿಫ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅವರು ಬುಧವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಅವರನ್ನು ಭೇಟಿಯಾಗಿ ಇರಾನ್ನ ರಕ್ಷಣಾ ವ್ಯವಸ್ಥೆಯ ಕುರಿತು ಚರ್ಚೆ ನಡೆಸಿದರು. ನಂತರ ಮಾತನಾಡಿರುವ ಅವರು, ‘ಜಾಗತಿಕವಾಗಿ ಭಾರತ ಬಹುಮುಖ್ಯ ರಾಷ್ಟ್ರ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವ ವಿಚಾರದಲ್ಲಿ ಭಾರತ ದೊಡ್ಡ ಪಾತ್ರ ನಿರ್ವಹಿಸಬಲ್ಲದು,’ ಎಂದು ಅವರು ಹೇಳಿದರು.