‘ಭಾರತ–ಪೆಸಿಫಿಕ್ ಭಾಗದಲ್ಲಿ ಭೌಗೋಳಿಕ ರಾಜಕೀಯ ಮತ್ತು ಸವಾಲುಗಳು’ ಕುರಿತಾದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬಾಹ್ಯ ಮತ್ತು ಆಂತರಿಕ ಭದ್ರತೆಯ ಪರಿಸರ ನಿರ್ಮಾಣದ ಜೊತೆಗೆಯಾವುದೇ ತಡೆಯಿಲ್ಲದ ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ರಾಜಕೀಯ ಅಭಿವೃದ್ಧಿ ಸಾಧಿಸುವುದು ಭಾರತದ ಆದ್ಯತೆಯಾಗಿದೆ’ ಎಂದು ತಿಳಿಸಿದರು.