ಮುಸ್ಲಿಂ ಸಮುದಾಯದವರೇ ಹೆಚ್ಚಾಗಿರುವ, ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಪರವಾಗಿ ಮಾತನಾಡಿದ ಅವರು, ‘ನಮ್ಮ ಹಿರಿಯರು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸುತ್ತಿದ್ದಾಗ, ಜಿನ್ನಾ ಅವರು ಮುಸ್ಲಿಂ ರಾಷ್ಟ್ರ ನಿರ್ಮಾಣಕ್ಕೆ ಒತ್ತಾಯಿಸುತ್ತಿದ್ದರು. ಆ ಸಂದರ್ಭದಲ್ಲೇ ನಮ್ಮ ಹೋರಾಟಗಾರರು ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಅಲ್ಲಿನ ಹಿಂದೂಗಳನ್ನು ಇಲ್ಲಿಗೆ ಕರೆತರಲು ತೀರ್ಮಾನಿಸಿದ್ದರೆ ಈಗ ಇಂಥ ಕಾಯ್ದೆ ರಚಿಸುವ ಅಗತ್ಯವೇ ಬರುತ್ತಿರಲಿಲ್ಲ. ಅವರು ಮಾಡಿದ ಒಂದು ತಪ್ಪಿಗೆ ನಾವು ಭಾರಿ ಬೆಲೆ ತೆರುತ್ತಿದ್ದೇವೆ’ ಎಂದು ಅವರು ಹೇಳಿದರು.