ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು
ಪಣಜಿ: ಸಿಎಎ ಪರವಾಗಿರುವ ಗೋವಾ ಕಾಂಗ್ರೆಸ್ನ ನಾಲ್ವರು ಮುಖಂಡರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಣಜಿ ಕಾಂಗ್ರೆಸ್ ವಲಯ ಸಮಿತಿ ಮಾಜಿ ಅಧ್ಯಕ್ಷ ಪ್ರಸಾದ್ ಅಮೋನ್ಕರ್, ಕಾರ್ಯದರ್ಶಿ ದಿನೇಶ್ ಕುಬಲ್, ಮಾಜಿ ಯುವ ಕಾಂಗ್ರೆಸ್ ಮುಖಂಡ ಶಿವರಾಜ್ ತರ್ಕಾರ್ ಹಾಗೂ ಉತ್ತರ ಗೋವಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾವೇದ್ ಶೇಖ್ ರಾಜೀನಾಮೆ ನೀಡಿದವರು. ಈ ಪೈಕಿ ಅಮೋನ್ಕರ್, ಕುಬಲ್ ಹಾಗೂ ತರ್ಕಾರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಬಿಜೆಪಿ ಇಲ್ಲಿ ಸಿಎಎ ಬಗ್ಗೆ ಜಾಗೃತಿ ರ್ಯಾಲಿ ನಡೆಸಲಿದೆ.