ಗುಟೆರಸ್ ಅವರು ಭಾನುವಾರ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಜತೆ ಮಾತುಕತೆ ನಡೆಸಿದ್ದರು. ಈ ವೇಳೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳ ಬಗ್ಗೆ ಚರ್ಚೆಯಾಗಿದೆ. ಬಳಿಕ ಕಾಶ್ಮೀರಕ್ಕೆ ಸಂಬಂಧಿಸಿ ಭಾರತ–ಪಾಕಿಸ್ತಾನ ಮಧ್ಯೆ ಇರುವ ಸಮಸ್ಯೆ ಪರಿಹರಿಸುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆಗುಟೆರಸ್ ಪ್ರತಿಕ್ರಿಯೆ ನೀಡಿದ್ದು, ಮಾತುಕತೆಯ ಪ್ರಸ್ತಾವ ಮುಂದಿಟ್ಟಿದ್ದಾರೆ.ಜಮ್ಮು–ಕಾಶ್ಮೀರ ಮತ್ತು ಭಾರತ–ಪಾಕಿಸ್ತಾನ ನಡುವಣ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿನ (ಎಲ್ಒಸಿ) ಪರಿಸ್ಥಿತಿ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಭಯ ರಾಷ್ಟ್ರಗಳು ಗರಿಷ್ಠ ಸಂಯಮ ವಹಿಸಬೇಕು ಎಂದೂಗುಟೆರಸ್ ಹೇಳಿದ್ದಾರೆ.