ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಭಾರತದ ನಿಯೋಗವು ಈ ಸಮಾವೇಶದಲ್ಲಿ ಭಾಗವಹಿಸುತ್ತಿದೆ. ನಿಯೋಗದಲ್ಲಿ ರೂಪಾ ಅವರಲ್ಲದೆ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ, ಎಲ್. ಹನುಮಂತಯ್ಯ, ಅಪರಾಜಿತಾ ಸಾರಂಗಿ ಮತ್ತು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಸ್ನೇಹಲತಾ ಶ್ರೀವಾಸ್ತವ ಅವರಿದ್ದಾರೆ.