‘ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಎಲ್ಲ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು, ಕ್ರೈಸ್ತರು, ಖಾಸಿಸ್, ಜೈಂತಿಯಾಸ್ ಮತ್ತು ಗಾರೋಸ್ ಸಮುದಾಯದವರನ್ನು ಯಾವುದೇ ರೀತಿ ಪ್ರಶ್ನೆ ಮಾಡದೆ ಮತ್ತು ದಾಖಲೆಗಳನ್ನು ಕೇಳದೆ ಭಾರತದ ಪೌರತ್ವ ನೀಡಬೇಕು. ಇದಕ್ಕಾಗಿ, ಕೇಂದ್ರ ಸರ್ಕಾರ ಶಾಸನ ರೂಪಿಸಬೇಕು’ ಎಂದು ಸೇನ್ ತೀರ್ಪಿನಲ್ಲಿ ಹೇಳಿದ್ದಾರೆ.