<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಭಾರತಕ್ಕೆ ಬರುವ ಎಲ್ಲಾ ಪ್ರವಾಸಿಗರ ವೀಸಾಗಳನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.</p>.<p>ಕೋವಿಡ್–19ನಿಂದ ಹೆಚ್ಚು ಪೀಡಿತವಾಗಿರುವ ಚೀನಾ, ಇಟಲಿ, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಸ್ಪೇನ್ನಿಂದ ಬರುವಭಾರತೀಯರು ಮತ್ತು ವಿದೇಶಿಯರು ಮೇಲೆ ಭಾರತ ನಿರ್ಬಂಧ ಹೇರಿದೆ. ಮಾರ್ಚ್ 11ವರೆಗೆ ನೀಡಿದ್ದ ವೀಸಾವನ್ನು ಸರ್ಕಾರ ರದ್ದು ಮಾಡಿದೆ.</p>.<p>ಭಾರತದಲ್ಲಿ ಈವರೆಗೆ ಕೋವಿಡ್–19 ಪೀಡಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ ಎರಡು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.</p>.<p>ವೀಸಾ ಅಮಾನತು ಆದೇಶ ಮಾರ್ಚ್ 13ರಂದು 1200 ಜಿಎಂಟಿ ಕಾಲಮಾನದ ಪ್ರಕಾರ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ರಾಜತಾಂತ್ರಿಕ, ಅಂತರರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ ಮತ್ತು ಯೋಜನಾ ವೀಸಾಗಳಿಗೆ ವಿನಾಯಿತಿ ನೀಡಲಾಗಿದೆ.</p>.<p>ಫೆಬ್ರುವರಿ 15ರ ನಂತರ ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಫ್ರಾನ್ಸ್, ಸ್ಪೇನ್ ಮತ್ತು ಜರ್ಮನಿಯಿಂದ ಆಗಮಿಸಿದ ಅಥವಾ ಭೇಟಿ ನೀಡಿದ ಭಾರತೀಯ ಪ್ರಜೆಗಳೂಸೇರಿದಂತೆ ಎಲ್ಲಾ ಪ್ರಯಾಣಿಕರನ್ನು ಕನಿಷ್ಠ 14 ದಿನಗಳವರೆಗೆ ನಿರ್ಬಂಧಿಸಲಾಗುತ್ತದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಭಾರತಕ್ಕೆ ಬರುವ ಎಲ್ಲಾ ಪ್ರವಾಸಿಗರ ವೀಸಾಗಳನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.</p>.<p>ಕೋವಿಡ್–19ನಿಂದ ಹೆಚ್ಚು ಪೀಡಿತವಾಗಿರುವ ಚೀನಾ, ಇಟಲಿ, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಸ್ಪೇನ್ನಿಂದ ಬರುವಭಾರತೀಯರು ಮತ್ತು ವಿದೇಶಿಯರು ಮೇಲೆ ಭಾರತ ನಿರ್ಬಂಧ ಹೇರಿದೆ. ಮಾರ್ಚ್ 11ವರೆಗೆ ನೀಡಿದ್ದ ವೀಸಾವನ್ನು ಸರ್ಕಾರ ರದ್ದು ಮಾಡಿದೆ.</p>.<p>ಭಾರತದಲ್ಲಿ ಈವರೆಗೆ ಕೋವಿಡ್–19 ಪೀಡಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ ಎರಡು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.</p>.<p>ವೀಸಾ ಅಮಾನತು ಆದೇಶ ಮಾರ್ಚ್ 13ರಂದು 1200 ಜಿಎಂಟಿ ಕಾಲಮಾನದ ಪ್ರಕಾರ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ರಾಜತಾಂತ್ರಿಕ, ಅಂತರರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ ಮತ್ತು ಯೋಜನಾ ವೀಸಾಗಳಿಗೆ ವಿನಾಯಿತಿ ನೀಡಲಾಗಿದೆ.</p>.<p>ಫೆಬ್ರುವರಿ 15ರ ನಂತರ ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಫ್ರಾನ್ಸ್, ಸ್ಪೇನ್ ಮತ್ತು ಜರ್ಮನಿಯಿಂದ ಆಗಮಿಸಿದ ಅಥವಾ ಭೇಟಿ ನೀಡಿದ ಭಾರತೀಯ ಪ್ರಜೆಗಳೂಸೇರಿದಂತೆ ಎಲ್ಲಾ ಪ್ರಯಾಣಿಕರನ್ನು ಕನಿಷ್ಠ 14 ದಿನಗಳವರೆಗೆ ನಿರ್ಬಂಧಿಸಲಾಗುತ್ತದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>