ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರು ವಿಚಾರಣೆಗಾಗಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವ ದಿನಾಂಕವನ್ನು ಮುಂದೂಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಪಾಕಿಸ್ತಾನಕ್ಕೆ ಬರುವಾಗ ತಮಗೆ ಭದ್ರತೆ ಒದಗಿಸಬೇಕು ಎಂದು ಅವರು ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಆದರೆ, ಸಚಿವಾಲಯ ಭದ್ರತೆ ನೀಡಲು ನಿರಾಕರಿಸಿತ್ತು.
ಮಾಜಿ ಅಧ್ಯಕ್ಷೆ ಬೆನಜೀರ್ ಭುಟ್ಟೋ ಅವರ ಹತ್ಯೆಯಲ್ಲಿ ಪರ್ವೇಜ್ ಅವರನ್ನು ‘ಘೋಷಿತ ಅಪರಾಧಿ’ ಎಂದು ನ್ಯಾಯಾಲಯ ಘೋಷಿಸಿದೆ.