ಸೇನೆಯು ಪರಿಸ್ಥಿತಿಯನ್ನು ವೃತ್ತಿಪರವಾಗಿ ಎದುರಿಸಿ ಭಾರತದೊಳಗೆ ನುಸುಳಲು ಕಾದು ನಿಂತಿದ್ದ ಭಯೋತ್ಪಾದಕರನ್ನು ಕೊಂದು ಹಾಕಿತ್ತು. ‘ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆ ನಿಗ್ರಹಿಸಲು ಗಮನ ಕೊಡದ ಪಾಕಿಸ್ತಾನ, ಭಾರತೀಯ ಸೇನೆಯ ದಾಳಿಯ ಬಗ್ಗೆ ಅಪಪ್ರಚಾರ ನಡೆಸುತ್ತಿದೆ’ ಎಂದು ಸೇನೆಯ ಉನ್ನತ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.