ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪ ಎರಡು ಸ್ಥಳಗಳಲ್ಲಿ ಭಾರತೀಯ ಸೇನೆ ದಾಳಿ ನಡೆಸಿದ್ದು, ವಿಡಿಯೊ ಸಹ ಬಿಡುಗಡೆ ಮಾಡಲಾಗಿದೆ. ಕದನ ವಿರಾಮ ಉಲ್ಲಂಘಿಸಿ ಕೆರನ್ ವಲಯದಲ್ಲಿ ಅಪ್ರಚೋದಕ ದಾಳಿ ನಡೆಸಿರುವುದಕ್ಕೆ ಭಾರತೀಯ ಸೇನೆ ಇಂದು ಮಧ್ಯಾಹ್ನ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.