‘ಕಿಡಿಗೇಡಿಗಳು, ಭಯೋತ್ಪಾದಕರು ಗಲಭೆ ಸೃಷ್ಟಿಸಬಹುದೆಂಬ ಕಾರಣಕ್ಕೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಇದರ ಹೊರತಾಗಿಯೂ ಈದ್ ಅಂಗವಾಗಿ ಸಾವಿರಾರು ಜನರು ಹೊರಬಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ’ ಎಂದು ಗೃಹಸಚಿವಾಲಯ ಹೇಳಿದೆ. ಜೊತೆಗೆ ಯಾವ ಮಸೀದಿಯಲ್ಲಿ ಎಷ್ಟು ಮಂದಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಮಾಹಿತಿಯನ್ನು ಒಳಗೊಂಡ ಪಟ್ಟಿಯನ್ನು ಸಹ ಮಾಧ್ಯಮಗಳಿಗೆ ನೀಡಿದೆ.