ಅದೇ ವೇಳೆ ಅನಗತ್ಯ ಪ್ರಯಾಣ ಕೈಗೊಳ್ಳಬೇಡಿ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಮನವಿ ಮಾಡಿದ್ದಾರೆ. ಮಂಗಳವಾರ ರೈಲ್ವೆ ಅಧಿಕಾರಿಗಳ ಪುನರ್ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯಲ್, ಕೊರೊನಾ ಸೋಂಕು ಹರಡದಂತೆ ರೈಲ್ವೆ ಇಲಾಖೆಯ ಎಲ್ಲ ವಲಯಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದರು.