<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಇರುವುದರಿಂದ ದೇಶದಾದ್ಯಂತ ರೈಲು ಸಂಚಾರವನ್ನು ಏಪ್ರಿಲ್ 14ರವರೆಗೂ ಸ್ಥಗಿತಗೊಳಿಸಿರುವುದಾಗಿ ಭಾರತೀಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಈಗಾಗಲೇ ಬಂದ್ ಆಗಿರುವ ರೈಲು ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೂ ವಿಸ್ತರಣೆ ಮಾಡಲಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ ಬೆನ್ನಲೇ ರೈಲ್ವೆ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.</p>.<p>ಸರಕು ಸಾಗಣೆಯ ಗೂಡ್ಸ್ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ, ಅವು ಎಂದಿನಂತೆ ಓಡಾಡಲಿವೆ, ಆದರೆ ಪ್ರಯಾಣಿಕ ಸೇವೆಯ ಎಲ್ಲಾ ರೈಲುಗಳು ಬಂದ್ ಆಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಪ್ರಯಾಣಿಕರು ರೈಲ್ವೆ ಟಿಕೆಟ್ಗಳನ್ನು ಮುಂಗಡ ಕಾಯ್ದಿರಿಸಿದ್ದರೇ ಆ ಟಿಕೆಟ್ಗಳನ್ನು ರದ್ದು ಮಾಡುವ ಅವಶ್ಯಕತೆ ಇಲ್ಲ, ಟಿಕೆಟ್ ಹಣವನ್ನು ಬುಕಿಂಗ್ ಮಾಡಿದವರ ಖಾತೆಗೆ ಜಮೆ ಮಾಡಲಾಗುವುದು ಎಂದು ಐಆರ್ಸಿಟಿಸಿ ತಿಳಿಸಿದೆ.</p>.<p>ಮಾರ್ಚ್ 22ರ ಜನತಾ ಕರ್ಫ್ಯೂ ದಿನದಿಂದ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಇರುವುದರಿಂದ ದೇಶದಾದ್ಯಂತ ರೈಲು ಸಂಚಾರವನ್ನು ಏಪ್ರಿಲ್ 14ರವರೆಗೂ ಸ್ಥಗಿತಗೊಳಿಸಿರುವುದಾಗಿ ಭಾರತೀಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಈಗಾಗಲೇ ಬಂದ್ ಆಗಿರುವ ರೈಲು ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೂ ವಿಸ್ತರಣೆ ಮಾಡಲಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ ಬೆನ್ನಲೇ ರೈಲ್ವೆ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.</p>.<p>ಸರಕು ಸಾಗಣೆಯ ಗೂಡ್ಸ್ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ, ಅವು ಎಂದಿನಂತೆ ಓಡಾಡಲಿವೆ, ಆದರೆ ಪ್ರಯಾಣಿಕ ಸೇವೆಯ ಎಲ್ಲಾ ರೈಲುಗಳು ಬಂದ್ ಆಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಪ್ರಯಾಣಿಕರು ರೈಲ್ವೆ ಟಿಕೆಟ್ಗಳನ್ನು ಮುಂಗಡ ಕಾಯ್ದಿರಿಸಿದ್ದರೇ ಆ ಟಿಕೆಟ್ಗಳನ್ನು ರದ್ದು ಮಾಡುವ ಅವಶ್ಯಕತೆ ಇಲ್ಲ, ಟಿಕೆಟ್ ಹಣವನ್ನು ಬುಕಿಂಗ್ ಮಾಡಿದವರ ಖಾತೆಗೆ ಜಮೆ ಮಾಡಲಾಗುವುದು ಎಂದು ಐಆರ್ಸಿಟಿಸಿ ತಿಳಿಸಿದೆ.</p>.<p>ಮಾರ್ಚ್ 22ರ ಜನತಾ ಕರ್ಫ್ಯೂ ದಿನದಿಂದ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>