‘ಭಾರತವು ಉಪಗ್ರಹ ನಿರೋಧಕ ಕ್ಷಿಪಣಿಯ ಪ್ರಾತ್ಯಕ್ಷಿಕೆಯನ್ನು ಯಶಸ್ವಿಯಾಗಿ ನಡೆಸಿದೆ. ಬಾಹ್ಯಾಕಾಶದಲ್ಲಿ 300 ಕಿ.ಮೀ. ಎತ್ತರದ ಕಕ್ಷೆಯಲ್ಲಿದ್ದ ಉಪಗ್ರಹವನ್ನು ನಮ್ಮ ಕ್ಷಿಪಣಿ ಹೊಡೆದು ಉರುಳಿಸಿದೆ. ಇದು ಯಾವುದೇ ದೇಶದ ವಿರುದ್ಧದ ಕಾರ್ಯಾಚರಣೆ ಅಲ್ಲ. ಈ ಕಾರ್ಯಾಚರಣೆ ಮೂಲಕ ನಾವು ಯಾವುದೇ ಅಂತರರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿಲ್ಲ’ ಎಂದು ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿಹೇಳಿದರು.