ಪಾಕಿಸ್ತಾನದ ಜತೆಗಿನ ಸಂಬಂಧ ವಿಷಮ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ರಾಜನಾಥ್ ಅವರು ಆ ದೇಶಕ್ಕೆ ಸರಿಯಾದ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಪಾಕಿಸ್ತಾನದ ಜತೆಗಿನ ಸಂಬಂಧ ಹದಗೆಟ್ಟಿದೆ. ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ, ದೇಶವು ಯಾವುದೇ ರೀತಿಯ ನಿರ್ಧಾರ ಕೈಗೊಳ್ಳಲು ಸಿದ್ಧ ಎಂಬ ಸಂದೇಶವನ್ನು ನೀಡುತ್ತಲೇ ಬಂದಿದೆ.