ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ: ಸಚಿವ ಸುರೇಶ್‌ ಪ್ರಭು

Last Updated 22 ಫೆಬ್ರುವರಿ 2019, 19:11 IST
ಅಕ್ಷರ ಗಾತ್ರ

ನವದೆಹಲಿ: ದೇಶದ ವಿವಿಧ ಏಳು ವಿಮಾನ ನಿಲ್ದಾಣಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗೆ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

ತಿರುವನಂತಪುರ, ಮಂಗಳೂರು, ಮದುರೆ, ರುಪ್ಸಿ, ಜೈಪುರ, ಅಮೃತಸರ ಮತ್ತು ಇಂಫಾಲ್‌ ವಿಮಾನ ನಿಲ್ದಾಣಗಳಲ್ಲಿ ₹497 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಲಿದೆ.

ತಿರುನಂತಪುರ, ಕೋಲ್ಕತ್ತ ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ₹ 132.15 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯನ್ನು ಇದೇ ವೇಳೆ ಸಚಿವರು ಉದ್ಘಾಟಿಸಿದರು.

‘ವಿಮಾನಯಾನ ಕ್ಷೇತ್ರವನ್ನು ವಿಸ್ತರಿಸುವ ದೃಷ್ಟಿಯಿಂದ ಹಲವೆಡೆ ಈ ಯೋಜನೆಯನ್ನು ನಾವು ಕೈಗೆತ್ತಿಕೊಂಡಿದ್ದೇವೆ.

ದೇಶದ ಎಲ್ಲಾ ಪ್ರದೇಶವನ್ನೂ ಅಭಿವೃದ್ಧಿಪಡಿಸುವ ತನಕ ನಾವು ನಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆಂದು ಹೇಳಲು ಆಗುವುದಿಲ್ಲ’ ಎಂದು ಸುರೇಶ್‌ಪ್ರಭು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT